Breaking News

ಲಂಚಕ್ಕೆ ಕೈಯೊಡ್ದಿದ್ದ ಇಂಜಿನಿಯರ್ ಲೋಕಾಯುಕ್ತ ಬಲೆಗೆ

Spread the love

ಹರಿಹರ: ಲಂಚಕ್ಕೆ ಕೈಯೊಡ್ದಿದ್ದ ಹರಿಹರ ತಾಲೂಕಿನ ಬೆಸ್ಕಾಂ ಇಂಜಿನಿಯರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ಬೆಸ್ಕಾಂ ಕಚೇರಿಯ ಸಹಾಯಕ ಕಾರ್ಯಪಡೆ ಇಂಜಿನಿಯರ್ ಬಿ.ಎಂ.ಕರಿಬಸವಯ್ಯ ಲೋಕಾಯುಕ್ತ ಬಲೆಗೆ ಬಿದ್ದವರು.

ಕೆಇಬಿ ಗುತ್ತಿಗೆದಾರ ಬೇವಿನಹಳ್ಳಿ ಮಹೇಶ್ವರಪ್ಪನಿಂದ ಲಂಚ ಸ್ವೀಕರಿಸುತ್ತಿದ್ದ ವೇಳೆ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ಇಂಜಿನಿಯರ್ ಕರಿಬಸವಯ್ಯನನ್ನು ಬಂಧಿಸಿದ್ದಾರೆ.

ಕಡತ ವಿಲೇವಾರಿಗಾಗಿ 15 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಕರಿಬಸವಯ್ಯ, ಅದಾಗಲೇ 9ಸಾವಿರ ರೂಪಾಯಿ ಪಡೆದಿದ್ದ. ಉಳಿದ 6 ಸಾವಿರ ರೂಪಾಯಿಲಂಚ ಪಡೆಯುತ್ತಿದ್ದಾಗ ಬೆಸ್ಕಾಂ ಕಚೇರಿಯಲ್ಲಿಯೇ ಬಲೆಗೆ ಬಿದ್ದಿದ್ದಾರೆ.


Spread the love

About Laxminews 24x7

Check Also

ಬಿಎಂಐಸಿ ಯೋಜನೆಯನ್ನು ಮರುಪರಿಶೀಲಿಸಲು ಸರ್ಕಾರಕ್ಕೆ ಸೂಚಿಸಿದ ಹೈಕೋರ್ಟ್

Spread the loveಬೆಂಗಳೂರು: ಕಳೆದ 25 ವರ್ಷಗಳಲ್ಲಿ ಕೇವಲ ಒಂದು ಕಿಲೋ ಮೀಟರ್‌ ಮಾತ್ರ ನಿರ್ಮಾಣಗೊಂಡಿರುವ ಬೆಂಗಳೂರು ಮೈಸೂರು ಮೂಲ ಸೌಕರ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ