Breaking News

ಬರ್ಬರವಾಗಿ ಹೆಂಡತಿಯನ್ನೇ ಕೊಲೆಗೈದ ಗಂಡ

Spread the love

ರಾಯಚೂರು: ಪತ್ನಿಯ ಶೀಲ ಶಂಕಿಸಿ ಪತಿ ಮಹಾಶಯ ಹೆಂಡತಿಯನ್ನೇ ಬರ್ಬರವಾಗಿ ಹತ್ಯೆಗೈದ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಸಾದಪುರದಲ್ಲಿ ನಡೆದಿದೆ.

ಪವಿತ್ರಾ ಅಲಿಯಾಸ್ ಮಮತಾ (22) ಮೃತ ಮಹಿಳೆ. ಆರೋಪಿ ನಾಗರಾಜ್ ಪತ್ನಿಯನ್ನೇ ಕೊಂದ ಪತಿ.

ಕಳೆದ ವರ್ಷವಷ್ಟೇ ವಿವಾಹವಾಗಿದ್ದ ಮಮತಾ ಹಾಗೂ ನಾಗರಾಜ್ ಮಾನ್ವಿ ಬಳಿಯ ಇಟ್ಟಿಗೆ ತಯಾರಿಕಾ ಕೇಂದ್ರದಲ್ಲಿ ಕೆಲಸ ಮಾಡುತ್ತಿದ್ದರು. ನಾಗರಾಜ್ ಗೆ ಪತ್ನಿ ಮಮತಾ ಮೇಲೆ ಅನುಮಾನ. ಅನುಮಾನ ವಿಪರೀತಕ್ಕೆ ಹೋಗಿ ಈಗ ಹೆಂಡತಿಯನ್ನೇ ಕೊಲೆಗೈದಿದ್ದಾನೆ.

ಮಾನ್ವಿ ಪೊಲೀಸರು ಆರೋಪಿ ನಾಗರಾಜ್ ನನ್ನು ವಶಕ್ಕೆ ಪಡೆದಿದ್ದಾರೆ.


Spread the love

About Laxminews 24x7

Check Also

ವಸ್ತುಗಳನ್ನು ಸಾಗಿಸುತ್ತಿದ್ದಾಗ ಏಕಾಏಕಿ ಕುಸಿದ ಲಿಫ್ಟ್‌ – ಇನ್‌ಸ್ಟಾ ಮಾರ್ಟ್‌ ಉದ್ಯೋಗಿ ಸಾವು

Spread the loveಮಂಗಳೂರು: ವಸ್ತುಗಳನ್ನು ಸಾಗಿಸುತ್ತಿದ್ದಾಗ ಏಕಾಏಕಿ ಲಿಫ್ಟ್‌ ಕುಸಿದು ಇನ್‌ಸ್ಟಾ ಮಾರ್ಟ್‌ ಉದ್ಯೋಗಿ ಸಾವನ್ನಪ್ಪಿರುವ ಘಟನೆ ಮಂಗಳೂರಿನ  ಕುಂಟಿಕಾನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ