Breaking News

ಸಿದ್ದರಾಮಯ್ಯಗೆ ಒಂದು ಮತವನ್ನೂ ಹಾಕಲ್ಲ; ಇಡೀ ಗ್ರಾಮದಿಂದ ವರ್ತೂರು ಪ್ರಕಾಶ್‌ಗೆ ಭರವಸೆ

Spread the love

ಕೋಲಾರ: ತಾಲೂಕಿನ ವೇಮಗಲ್‌ ಹೋಬಳಿಯ ಕುರುಬರಹಳ್ಳಿ ಗ್ರಾಮಕ್ಕೆ ಇತ್ತೀಚೆಗಷ್ಟೇ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ ಚುನಾವಣೆಯಲ್ಲಿ ಬೆಂಬಲಿಸುವಂತೆ ಕೋರಿದ್ದ ಬೆನ್ನಲ್ಲಿಯೇ ಗ್ರಾಮಸ್ಥರು ವರ್ತೂರು ಪ್ರಕಾಶ್‌ ಅವರನ್ನು ಆಹ್ವಾನಿಸಿ ಸಿದ್ದರಾಮಯ್ಯರಿಗೆ ಒಂದು ಮತವನ್ನೂ ಹಾಕುವುದಿಲ್ಲ ಎಂದು ಭರವಸೆ ನೀಡಿರುವ ಕುತೂಹಲ ಸಂಗತಿ ನಡೆದಿದೆ.

ಕುರುಬರಹಳ್ಳಿ ಗ್ರಾಮಸ್ಥರು ಸಾಮೂಹಿಕವಾಗಿ ಮಾಜಿ ಸಚಿವ ವರ್ತೂರು ಪ್ರಕಾಶ್‌ ಅವರನ್ನು ಗ್ರಾಮಕ್ಕೆ ಕರೆಯಿಸಿ ಅದ್ಧೂರಿಯಾಗಿ ಕಾರ್ಯಕ್ರಮ ಮಾಡಿ ಸನ್ಮಾನಿಸಿ, ನಮ್ಮ ಗ್ರಾಮದಿಂದ ಒಂದು ಮತ ಕೂಡ ಸಿದ್ಧರಾಮಯ್ಯನವರಿಗೆ ಹಾಕುವುದಿಲ್ಲ. ಸತತ 15 ವರ್ಷಗಳಿಂದ ವರ್ತೂರು ಪ್ರಕಾಶ್‌ ಅವರೇ ನಮಗೆ ದೇವರು. ನಮ್ಮ ಕಷ್ಟ ಸುಖಗಳಲ್ಲಿ ಭಾಗಿಯಾಗಿ ಸದಾ ನಮ್ಮೊಂದಿಗೆ ಇರುವ ಒಬ್ಬ ನಾಯಕ. ಇಂತಹ ನಾಯಕನನ್ನು ಕಳೆದುಕೊಳ್ಳುವುದಕ್ಕೆ ನಾವು ಒಪ್ಪಿಕೊಳ್ಳುವುದಿಲ್ಲ. ನಮ್ಮ ಬೆಂಬಲ ವರ್ತೂರು ಪ್ರಕಾಶ್‌ಗೆ ಎಂದು ಅಭಿಪ್ರಾಯಿಸಿದರು


Spread the love

About Laxminews 24x7

Check Also

ಕುಡಿಯುವ ನೀರಿನ ಬಗ್ಗೆ ಚರ್ಚೆ: ಅಧಿಕಾರಿಗಳ ಬೆವರಿಳಿಸಿದ ಸಚಿವ ಬೈರತಿ ಸುರೇಶ್

Spread the loveಕೋಲಾರ: ‌ಕುಡಿಯುವ ನೀರಿನ ವಿಚಾರವಾಗಿ ಸರಿಯಾಗಿ ಮಾಹಿತಿ ನೀಡದ ಹಾಗೂ ಸಮಸ್ಯೆ ನೀಗಿಸಲು ಕ್ರಮ ವಹಿಸದ ಅಧಿಕಾರಿಗಳನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ