Breaking News

ಬೆಳಗಾವಿಗೆ ಮದುವಣಗಿತ್ತಿಯ ಕಳೆ

Spread the love

ಬೆಳಗಾವಿ: ಕುಂದಾನಗರಿ ಬೆಳಗಾವಿಗೆ ಸೋಮವಾರ ಮಧ್ಯಾಹ್ನ ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿದ್ದು ಅವರ ಅಭೂತಪೂರ್ವ ಸ್ವಾಗತಕ್ಕೆ ಇಡೀ ಜಿಲ್ಲೆಯ ಜನರು ಕಾತುರದಿಂದ ಕಾಯುತ್ತಿದ್ದಾರೆ.

ಕಮಲ ಪಾಳೆಯ ಹಬ್ಬೋಪಾದಿಯಲ್ಲಿ ಎಲ್ಲ ಸಿದ್ಧತೆ ಕೈಗೊಂಡಿದೆ. ನರೇಂದ್ರ ಮೋದಿ ಅವರ ಆಗಮನ ಹಿನ್ನೆಲೆಯಲ್ಲಿ ಬೆಳಗಾವಿ ನಗರಕ್ಕೆ ಮದುವಣಗಿತ್ತಿಯ ಕಳೆಬಂದಿದೆ.

ಮಧ್ಯಾಹ್ನ 2 ಗಂಟೆಗೆ ನಗರಕ್ಕೆ ಆಗಮಿಸುವ ಪ್ರಧಾನಿ ಅವರು ಇದೇ ಪ್ರಥಮ ಬಾರಿಗೆ ನಗರದಲ್ಲಿ ಆಯೋಜಿಸಲಾಗಿರುವ 10.45 ಕಿ.ಮೀ. ರೋಡ್ ಶೋ ದಲ್ಲಿ ಭಾಗವಹಿಸಿ ಜನರ ಸಂತಸದಲ್ಲಿ ಭಾಗಿಯಾಗಲಿದ್ದಾರೆ, ನಂತರ ಮುಖ್ಯ ವೇದಿಕೆಯಲ್ಲಿ ನಡೆಯುವ ಸಮಾರಂಭದಲ್ಲಿ ವಿವಿಧ ಯೋಜನೆಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆಯ ಸಮಾರಂಭಕ್ಕೆ ಸಾಕ್ಷಿಯಾಗಲಿದ್ದಾರೆ.

ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವರಾದ ಪ್ರಹ್ಲಾದ ಜೋಶಿ, ನರೇಂದ್ರಸಿಂಗ್ ಥೋಮರ್, ಶೋಭಾ ಕರಂದ್ಲಾಜೆ, ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಮಾಜಿ ಮುಖ್ಯಮಂತ್ರಿ ಬಿ ಎಸ್. ಯಡಿಯೂರಪ್ಪ, ಸಂಸದರು, ಶಾಸಕರು ಪಾಲ್ಗೊಳ್ಳಲಿದ್ದಾರೆ.


Spread the love

About Laxminews 24x7

Check Also

ಕೇರಳ ಸಿಎಂ ಪುತ್ರಿಯ ಕಂಪನಿ ವಿರುದ್ಧ ತನಿಖೆಗೆ ಆದೇಶ ಪ್ರಶ್ನಿಸಿ ಮೇಲ್ಮನವಿ: ಕೇಂದ್ರಕ್ಕೆ ಹೈಕೋರ್ಟ್ ನೋಟಿಸ್‌

Spread the love ಬೆಂಗಳೂರು: ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರ ಪುತ್ರಿ ಟಿ.ವೀಣಾ ಅವರು ನಿರ್ದೇಶಕಿಯಾಗಿರುವ ಎಕ್ಸಲಾಜಿಕ್‌ ಸಲ್ಯೂಷನ್‌ ಪ್ರೈವೇಟ್‌ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ