Breaking News

ನಾಳೆಯಿಂದ ಸರ್ಕಾರಿ ನೌಕರರ ಮುಷ್ಕರ

Spread the love

ಬೆಂಗಳೂರು: ವೇತನ ಭತ್ಯೆ ಪರಿಷ್ಕರಣೆ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ಸರ್ಕಾರಿ ನೌಕರರ ಸಂಘ ಮಾ.1ರಿಂದ ಅನಿರ್ಧಿಷ್ಟಾವಧಿಯ ಮುಷ್ಕರಕ್ಕೆ ಮುಂದಾಗಿದ್ದು, ಮುಷ್ಕರದ ವೇಳೆ ಉಪವಾಸ, ಧರಣಿ ಸತ್ಯಾಗ್ರಹ ಹಾಗೂ ಘೋಷಣೆ ಕೂಗುವುದನ್ನು ನಿರ್ಬಂಧಿಸಲಾಗಿದೆ.

 

ಮುಷ್ಕರ ಯಶಸ್ವಿಗೊಳಿಸುವ ಸಂಬಂಧ ಸಂಘ ಸೋಮವಾರ ಮಾರ್ಗಸೂಚಿ ಪ್ರಕಟಿಸಿದೆ. ಶಾಂತಿಯುತ ಹೋರಾಟಕ್ಕೆ ಸೂಚನೆ ನೀಡಲಾಗಿದೆ. ಜಾಲತಾಣ ಮತ್ತು ಮಾಧ್ಯಮಗಳಲ್ಲಿ ಯಾವುದೇ ಜನಪ್ರತಿನಿಧಿಗಳನ್ನು ಟೀಕಿಸದಂತೆ ತಾಕೀತು ಮಾಡಿದೆ.

ಆರೋಗ್ಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ತುರ್ತು ಸೇವೆಗಳ ಸಿಬ್ಬಂದಿ ಕಪ್ಪು ಬಟ್ಟೆ ಧರಿಸಿ ಕರ್ತವ್ಯ ನಿರ್ವಹಿಸುವಂತೆ ತಿಳಿಸಿದೆ. ಉಳಿದಂತೆ ಎಲ್ಲ ಸಿಬ್ಬಂದಿ ಕಡ್ಡಾಯವಾಗಿ ಮುಷ್ಕರದಲ್ಲಿ ಭಾಗವಹಿಸುವಂತೆ ಸೂಚನೆ ನೀಡಿದೆ.

ಇಲಾಖೆಯ ಎಲ್ಲಾ ವೃಂದ ಸಂಘಗಳ ಅಧ್ಯಕ್ಷರು ತಮ್ಮ ಅಧೀನದಲ್ಲಿ ಬರುವ ಉಪ ಸಂಘಗಳ ಅಧ್ಯಕ್ಷರು ಮತ್ತು ಪದಾಧಿಕಾರಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅನಿರ್ಧಿಷ್ಟ ಅವಧಿಯ ಮುಷ್ಕರ ಯಶಸ್ವಿಗೊಳಿಸುವಂತೆ ಸಂಘ ಸೂಚನೆ ನೀಡಿದೆ. ಮಾ.1ರಿಂದ ಎಲ್ಲಾ ಇಲಾಖೆಗಳ ನೌಕರರು ಕರ್ತವ್ಯಕ್ಕೆ ಗೈರು ಹಾಜರಾಗುವಂತೆ ಸಂಘ ತಿಳಿಸಿದೆ.


Spread the love

About Laxminews 24x7

Check Also

ಸಿಎಂ ಫೋನ್ ಮಾಡಿ ಸಮಾಧಾನಪಡಿಸಿದ ಬಳಿಕ ಕರ್ತವ್ಯಕ್ಕೆ ಹಾಜರಾದ ASP ಭರಮನಿ

Spread the loveಧಾರವಾಡ/ಬೆಂಗಳೂರು: ಸ್ವಯಂ ನಿವೃತ್ತಿಗೆ ಕೋರಿಕೆ ಸಲ್ಲಿಸಿದ್ದ ಧಾರವಾಡ ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎನ್‌.ವಿ.ಭರಮನಿ ಅವರು ಸಿಎಂ ಸಮಾಧಾನಪಡಿಸಿದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ