Breaking News

ಕೊಡಲಿಯಿಂದ ಹೊಡೆದು ಮಗನ ಕೊಲೆ ಮಾಡಿದ ತಂದೆ

Spread the love

ಕಾಗವಾಡ: ತಾಲ್ಲೂಕಿನ ಉಗಾರ ಬಿ.ಕೆ.

ಗ್ರಾಮದಲ್ಲಿ ಮಂಗಳವಾರ ತಂದೆ ಮಗನನ್ನು ಕೊಡಲಿಯಿಂದ ಹೊಡೆದು ಕೊಲೆ ಮಾಡಿದ್ದಾನೆ.

ಭರತೇಶ ಉರೂಫ್‌ ಚೇತನ್‌ ಖಾಂಜೆ (30) ಕೊಲೆಯಾದ ಯುವಕ. ಜಿನ್ನಪ್ಪ ಪಾಯಪ್ಪ ಖಾಂಜೆ (64) ಕೊಲೆ ಆರೋಪಿ.

‘ಭರತೇಶ ಯಾವುದೇ ಕೆಲಸ ಮಾಡುತ್ತಿರಲಿಲ್ಲ. ತಂದೆ- ತಾಯಿಯನ್ನು ಕಾಳಜಿಯಿಂದ ನೋಡಿಕೊಳ್ಳುತ್ತಿರಲಿಲ್ಲ. ಕುಡಿತದ ಚಟ ಬೆಳೆಸಿಕೊಂಡಿದ್ದ. ಮದ್ಯಕ್ಕಾಗಿ ಹಣ ಕೊಡುವಂತೆ ಪದೇ ಪದೇ ಹೆತ್ತವರೊಂದಿಗೆ ಜಗಳವಾಡುತ್ತಿದ್ದ. ಮಂಗಳವಾರ ಕೂಡ ಇದೇ ಕಾರಣಕ್ಕೆ ಜಗಳ ನಡೆದಿದ್ದು, ಆವೇಶದಲ್ಲಿ ಕೊಲೆಯಾಗಿದೆ’ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಘಟನೆಯ ಬಳಿಕ ಆರೋಪಿ ತಾನಾಗಿಯೇ ಪೊಲೀಸರಿಗೆ ಶರಣಾಗಿದ್ದಾನೆ. ಪಿಎಸ್‌ಐ ಹಣಮಂತ ನರಳೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.


Spread the love

About Laxminews 24x7

Check Also

ದಾವಣಗೆರೆ, ಬಾಗಲಕೋಟೆ ವಿಧಾನಸಭೆ ಬೈಎಲೆಕ್ಷನ್: ಉಸ್ತುವಾರಿ ಸಮಿತಿ ರಚನೆ; 31 ಜನರಿಗೆ ಜವಾಬ್ದಾರಿ

Spread the loveಬೆಂಗಳೂರು: ದಾವಣಗೆರೆ ಮತ್ತು ಬಾಗಲಕೋಟೆ ವಿಧಾನಸಭೆ ಉಪ ಚುನಾವಣೆ  ಹಿನ್ನೆಲೆ  ಎರಡೂ ಕ್ಷೇತ್ರಕ್ಕೆ ಕಾಂಗ್ರೆಸ್ ಉಸ್ತುವಾರಿ ವೀಕ್ಷಕರ ನೇಮಿಸಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ