Breaking News

ಡಿ.ಕೆ ಶಿವಕುಮಾರ್ ಕಾಂಗ್ರೆಸ್ ಪಕ್ಷದ ‘ಸಿಎಂ ಅಭ್ಯರ್ಥಿ’ : ಡಿ.ಕೆ ಸುರೇಶ್ ಘೋಷಣೆ

Spread the love

ಹಾಸನ : ಡಿ.ಕೆ ಶಿವಕುಮಾರ್ ಕಾಂಗ್ರೆಸ್ ಪಕ್ಷದ ‘ಸಿಎಂ ಅಭ್ಯರ್ಥಿ’ ಎಂದು ಡಿ.ಕೆ ಸುರೇಶ್ ( D.K Suresh ) ಘೋಷಣೆ ಮಾಡಿದ್ದಾರೆ.

ಹಾಸನ ಜಿಲ್ಲೆ ಚನ್ನರಾಯಪಟ್ಟಣದಲ್ಲಿ ನಡೆದ ಕಾಂಗ್ರೆಸ್ ಪ್ರಜಾಧ್ವನಿ ಸಮಾವೇಶದಲ್ಲಿ ಮಾತನಾಡಿದ ಡಿಕೆ ಸುರೇಶ್ ತಾಕತ್ ಇದ್ದರೆ ಕಾಂಗ್ರೆಸ್ ನವರು ಸಿಎಂ ಅಭ್ಯರ್ಥಿಯನ್ನು ಘೋಷಣೆ ಮಾಡಲಿ ಎಂದು ಬಿಜೆಪಿ ನಾಯಕರು ಸವಾಲ್ ಹಾಕಿದ್ದರು.

ಇದಕ್ಕೆ ತಿರುಗೇಟು ನೀಡಿದಂತಹ ಡಿ.ಕೆ ಸುರೇಶ್ ಅವರು ಡಿ.ಕೆ ಶಿವಕುಮಾರ್ ಕಾಂಗ್ರೆಸ್ ಪಕ್ಷದ ‘ಸಿಎಂ ಅಭ್ಯರ್ಥಿ’ ಎಂದು ಘೋಷಿಸಿದ್ದಾರೆ. ಈ ಬಾರಿ ಡಿ.ಕೆ ಶಿವಕುಮಾರ್ ಅವರಿಗೂ ಅವಕಾಶ ಕೊಡಿ. ಡಿ.ಕೆ ಶಿವಕುಮಾರ್ ಸಿಎಂ ಆಗಲಿ ಎಂದು ಕಾರ್ಯಕರ್ತರು, ಜನರಲ್ಲಿ ಮನವಿ ಮಾಡಿದ್ದಾರೆ.

ಮೋದಿ ಆರೋಗ್ಯ ಚೆನ್ನಾಗಿರಲಿ, ಆದ್ರೆ ಅವ್ರು ಸುಳ್ಳು ಹೇಳುವುದನ್ನ ಬಿಡಲಿ – ಮಾಜಿ ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಮೋದಿ ಆರೋಗ್ಯ ಚೆನ್ನಾಗಿರಲಿ, ಆದ್ರೆ ಅವ್ರು ಸುಳ್ಳು ಹೇಳುವುದನ್ನ ಬಿಡಲಿ ಅಂಥ ಮಾಜಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಅವರು ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡುತ್ತ ಈ ಬಗ್ಗೆ ತಿಳಿಸಿದರು. ಇದೇ ವೇಳೆ ಅವರು : ಮೋದಿ ಜನರ ಕೆಲಸ ಮಾಡಿಲ್ಲ. ಅವರು ಬರೀ ಸುಳ್ಳು ಹೇಳುತ್ತಾರೆ. ನೀಡಿದ ಭರವಸೆ ಈಡೇರಿಸಿಲ್ಲ ಅಂತಾ ನಾವು ಹೇಳಿದ್ದೇವೆ. ಧಾನಿ ಮೋದಿಯವರು ಪಾಪ ಇನ್ನೂ ಬದುಕಿರಲಿ, ಅವರ ಆರೋಗ್ಯ ಚೆನ್ನಾಗಿರಲಿ ಅಂತ ತಿಳಿಸಿದರು. ಇದೇ ವೇಳೆ ಅವರು ನನಗೆ ಸಿದ್ದರಾಮಯ್ಯರನ್ನ ಮುಗಿಸಿ ಬಿಡಿ ಅಂತ ಅಶ್ವಥ್ ನಾರಾಯಣ್ ಹೇಳಿದ್ದರು. ಆ ತರಹ ಯಾರಾದರೂ ಹೇಳಿದ್ದಾರಾ ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು. ಮೋದಿಯವರು ಪಾಪ ಬದುಕಿರಲಿ, ದೇಶದ ಪ್ರಧಾನಮಂತ್ರಿಗಳು ಆರೋಗ್ಯವಾಗಿರಲಿ ಎಂದು ತಿಳಿಸಿದರು.


Spread the love

About Laxminews 24x7

Check Also

ಹಠಾತ್​ ಸಾವು ಅಧಿಸೂಚಿತ ಕಾಯಿಲೆ, ಮರಣೋತ್ತರ ಪರೀಕ್ಷೆ ಕಡ್ಡಾಯ: ಸಚಿವ ದಿನೇಶ್​ ಗುಂಡೂರಾವ್

Spread the loveಬೆಂಗಳೂರು: ಕೋವಿಡ್​​ ಲಸಿಕೆಯಿಂದ ಹೃದಯಾಘಾತ ಸಂಭವಿಸುತ್ತಿಲ್ಲ ಎಂಬುದು ವರದಿಯಲ್ಲಿ ಗೊತ್ತಾಗಿದೆ. ಜಯದೇವ ಹೃದ್ರೋಗ ಆಸ್ಪತ್ರೆಯ ನಿರ್ದೇಶಕ ಡಾ.ರವೀಂದ್ರನಾಥ್ ನೇತೃತ್ವದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ