Breaking News

ಮಾಡಾಳ್ ವಿರೂಪಾಕ್ಷಪ್ಪ ನಿವಾಸದ ಮೇಲೆ ದಾಳಿ ಮಾಡಿಸಿದ್ದು, ಸಂಸದ ಜಿ.ಎಂ.ಸಿದ್ದೇಶ್ವರ್ ಹೊಸ ಬಾಂಬ್ ಸಿಡಿಸಿದ್ದಾರೆ.: ಶಾಮನೂರು ಶಿವಶಂಕರಪ್ಪ

Spread the love

ದಾವಣಗೆರೆ: ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ನಿವಾಸದ ಮೇಲೆ ಲೋಕಾಯುಕ್ತ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಹೊಸ ಬಾಂಬ್ ಸಿಡಿಸಿದ್ದಾರೆ.

ದಾವಣಗೆರೆಯಲ್ಲಿ ಮಾತನಾಡಿದ ಶಾಮನೂರು ಶಿವಶಂಕರಪ್ಪ, ಮಾಡಾಳ್ ವಿರೂಪಾಕ್ಷಪ್ಪ ನಿವಾಸದ ಮೇಲೆ ದಾಳಿ ಮಾಡಿಸಿದ್ದು, ಸಂಸದ ಜಿ.ಎಂ.ಸಿದ್ದೇಶ್ವರ್ ಎಂದು ಹೇಳಿದ್ದಾರೆ.

ಜಿ.ಎಂ.ಸಿದ್ದೇಶ್ವರ್ ಅವರೇ ದಾಳಿ ಮಾಡಿಸಿದ್ದು ಎಂದು ನಮ್ಮ ಪಕ್ಷದಲ್ಲಿ ಮಾತನಾಡಿಕೊಳ್ಳುತ್ತಿದ್ದಾರೆ. ಇಷ್ಟಕ್ಕೂ ಅವರ ಪಕ್ಷದ ವ್ಯವಹಾರ ನಮಗೆ ಯಾಕೆ ಎಂದು ಪ್ರಶ್ನಿಸಿದ್ದಾರೆ.

ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದಿದ್ದರು. ಇದರ ಬೆನ್ನಲ್ಲೇ ಅವರ ಕಚೇರಿ, ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ 8 ಕೋಟಿಗೂ ಅಧಿಕ ನಗದು ಹಣ ಜಪ್ತಿ ಮಾಡಿದ್ದರು


Spread the love

About Laxminews 24x7

Check Also

ಶಾಸಕ ಕೆ.ಸಿ.ವೀರೇಂದ್ರ ಮತ್ತೆ 6 ದಿನ ಇ.ಡಿ ಕಸ್ಟಡಿಗೆ

Spread the love ಬೆಂಗಳೂರು: ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ಅವರ ಐದು ದಿನಗಳ ಪೊಲೀಸ್ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ