Breaking News
Home / ರಾಜಕೀಯ / ಸೀರೆಗಳನ್ನು ಹಂಚಲು ಮುಂದಾದ ಮಾಜಿ I,A,S, ಅಧಿಕಾರಿ 20 ಸಾವಿರಕ್ಕೂ ಹೆಚ್ಚು ಮುಗಿಬಿದ್ದ ಮಹಿಳೆಯರು

ಸೀರೆಗಳನ್ನು ಹಂಚಲು ಮುಂದಾದ ಮಾಜಿ I,A,S, ಅಧಿಕಾರಿ 20 ಸಾವಿರಕ್ಕೂ ಹೆಚ್ಚು ಮುಗಿಬಿದ್ದ ಮಹಿಳೆಯರು

Spread the love

ರಾಯಬಾಗ: ಚುನಾವಣೆ ಸಮೀಪಿಸುತ್ತಿದ್ದಂತೆ ಈಗ ಎಲ್ಲೆಡೆ ಗಿಫ್ಟ್ ಪಾಲಿಟಿಕ್ಸ್ ತಾರಕಕ್ಕೇರುತ್ತಿದೆ. ಒಂದೆಡೆ ಪ್ರಾಮಾಣಿಕತೆಯ ಮಂತ್ರ, ಇನ್ನೊಂದೆಡೆ ಆಮಿಷದ ತಂತ್ರ ಮುಂದುವರಿದಿದೆ. ಹೊಸಹೊಸ ಆಕಾಂಕ್ಷಿಗಳು ತಮ್ಮ ಜಾಗ ಭದ್ರಪಡಿಸಿಕೊಳ್ಳಲು ಹೈ ಕಮಾಂಡ್ ಪಾದಪೂಜೆಯ ಜೊತೆಜೊತೆಗೇ ಜನರ ನಿಯತ್ತನ್ನೇ ಹಾಳುಗೆಡವುತ್ತಿದ್ದಾರೆ. ಇದೀಗ ರಾಯಬಾಗ ಕ್ಷೇತ್ರದಲ್ಲಿ ನಡೆದ ವಿದ್ಯಮಾನವೊಂದು ಯಾರು ಪ್ರಾಮಾಣಿಕರು? ಅಧಿಕಾರ ಮುಖ್ಯವೋ, ಪ್ರಾಮಾಣಿಕತೆ ಮುಖ್ಯವೋ ಎಂಬೆಲ್ಲ ವಿಷಯಗಳ ಬಗ್ಗೆ ಚರ್ಚೆ ಹುಟ್ಟುಹಾಕಿದೆ.

ರಾಯಬಾಗ ಮತಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿರುವ ತಮಿಳುನಾಡು ಸರಕಾರದ ಮಾಜಿ ಐಎಎಸ್ ಅಧಿಕಾರಿ ಶಂಭು ಕಲ್ಲೋಳಿಕರ ರಾಯಬಾಗ ತಾಲೂಕಿನ ಜೋಡಟ್ಟಿ ಗ್ರಾಮದ ಕಲ್ಲೋಳಿಕರ ತೋಟದಲ್ಲಿ ಬಾವಿ ಪೂಜೆ ಹಾಗೂ ಸುಮಂಗಲಿಯರ ಉಡಿ ತುಂಬುವ ಕಾರ್ಯಕ್ರಮ ಆಯೋಜಿಸಿ ಸೀರೆಗಳನ್ನು ಹಂಚಲು ಮುಂದಾಗಿದ್ದಾರೆ.

ಈ ವಿಷಯ ಒಬ್ಬರಿಂದೊಬ್ಬರಿಗೆ ಹರಡಿ ಸುಮಾರು 20 ಸಾವಿರಕ್ಕೂ ಹೆಚ್ಚು ಮಹಿಳೆಯರು ಮುಗಿಬಿದ್ದಿದ್ದಾರೆ.

ಇದ್ದ ಸೀರೆ ಲೆಕ್ಕಕ್ಕೂ ಬಂದ ಮಹಿಳೆಯರ ಲೆಕ್ಕಕ್ಕೂ ತಾಳಮೇಳವಾಗದೇ ತಬ್ಬಿಬ್ಬಾದ ಸಂಘಟಕರು ಮಹಿಳೆಯರ ಆಗಮನ ನಿಯಂತ್ರಿಸಲಾಗದೆ ಸೀರೆ ಹಂಚಿಕೆ ಸ್ಥಗಿತಗೊಳಿಸಿದ್ದಾರೆ. ಮಹಿಳೆಯರ ಈ ನೂಕುನುಗ್ಗಲಿನ ಮಧ್ಯೆ ಕಾಲ್ತುಳಿದ ಘಟನೆಯಲ್ಲಿ ಮೂರ್ನಾಲ್ಕು ಮಹಿಳೆಯರು ಗಾಯಗೊಂಡಿದ್ದಾರೆ. ಸೀರೆ ಸಿಗದ ನೀರೆಯರೆಲ್ಲ ನಿಗಿನಿಗಿ ಕೆಂಡದಂಥ ಕೋಪ ಕಾರುತ್ತ ಮನೆಯತ್ತ ಹೆಜ್ಜೆ ಹಾಕಿದರು.


Spread the love

About Laxminews 24x7

Check Also

ಪಾನಿಪುರಿ ಮಾರುವ ಜ್ಯೂನೀಯರ್ ಮೋದಿ; ಮೋದಿ ತರಾನೇ..ಆದ್ರೆ ಅಲ್ಲ!

Spread the loveನವದೆಹಲಿ: ಗುಜರಾತ್‌ನ ಪಾನಿ ಪುರಿ ಮಾರಾಟಗಾರ ಅನಿಲ್ ಭಾಯಿ ಠಕ್ಕರ್ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಹೋಲುವ ಹಾಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ