Breaking News

ಅಂಕೋಲಾ ಹಾಗೂ ಭಟ್ಕಳ ನಿಲ್ದಾಣಗಳಲ್ಲಿ ಎಕ್ಸ್ ಪ್ರೆಸ್ ರೈಲುಗಳ ನಿಲುಗಡೆಗೆ ರೈಲ್ವೆ ಇಲಾಖೆ ಅನುಮತಿ

Spread the love

ಶಿರಸಿ: ಉತ್ತರ ಕನ್ನಡ ಸಂಸದ ಅನಂತಕುಮಾರ ಹೆಗಡೆ ಅವರ ಕೋರಿಕೆಯ ಮೇರೆಗೆ ಅಂಕೋಲಾ ಹಾಗೂ ಭಟ್ಕಳ ನಿಲ್ದಾಣಗಳಲ್ಲಿ ಎಕ್ಸ್ ಪ್ರೆಸ್ ರೈಲುಗಳ ನಿಲುಗಡೆಗೆ ರೈಲ್ವೆ ಇಲಾಖೆ ಅನುಮತಿ ನೀಡಿದೆ.

ಅಂಕೋಲಾ ನಿಲ್ದಾಣದಲ್ಲಿ ನಾಳೆ(ಮಾ.9)ಯಿಂದ ಕೊಚುವೆಲಿ- ಮುಂಬೈ ಎಕ್ಸ್ ಪ್ರೆಸ್ ರೈಲು ನಿಲುಗಡೆಯಾಗಲಿದೆ. ಭಟ್ಕಳ ನಿಲ್ದಾಣದಲ್ಲಿ ತಿರುವಂತನಪುರ-ಪನವೇಲ್ ನೇತ್ರಾವತಿ ಎಕ್ಸ್ ಪ್ರೆಸ್ ರೈಲು ನಿಲುಗಡೆಯಾಗಲಿದೆ.

ಈ ಮೂಲಕ ಅಂಕೋಲಾ‌ ಹಾಗೂ ಭಟ್ಕಳ ಭಾಗದ ಜನರ ದೀರ್ಘ ಕಾಲದ ಬೇಡಿಕೆಯನ್ನು ರೈಲ್ವೆ ಇಲಾಖೆ ಈಡೇರಿಸಿದಂತಾಗಿದೆ. ಈ ರೈಲುಗಳ ನಿಲುಗಡೆಗಾಗಿ ಈ ಹಿಂದೆ ಜನ ಮನವಿ ಮಾಡಿಕೊಂಡಿದ್ದ ಮೇರೆಗೆ ಅನಂತಕುಮಾರ ಹೆಗಡೆ ಅವರು ಬೇಡಿಕೆ ಈಡೇರಿಸಲು ಕೋರಿ ರೈಲ್ವೆ ಇಲಾಖೆಗೆ ಪತ್ರ ಬರೆದಿದ್ದರು. ಈ ರೈಲುಗಳ ನಿಲುಗಡೆಯಿಂದ ಕೇರಳ ಹಾಗೂ ಮುಂಬೈ ಕಡೆ ಹೋಗುವ ಹಾಗೂ ಬರುವ ಪ್ರಯಾಣಿಕರಿಗೆ ಅನುಕೂಲವಾಗಲಿದೆ.

ಅದೇ ರೀತಿ ಹಿಸ್ಸಾರ್-ಕೊಯಿಮತ್ತೂರು ರೈಲಿಗೆ ಕುಮಟಾದಲ್ಲಿ ನಿಲುಗಡೆ ಕುರಿತ ಆದೇಶ ಸದ್ಯವೇ ಹೊರಡುವ ನಿರೀಕ್ಷೆ ಇದೆ ಎಂದು ಸಂಸದರ ಅನಂತ ಕುಮಾರ್‌ ಹೆಗಡೆ ಕಚೇರಿ ಪ್ರಕಟಣೆ ತಿಳಿಸಿದೆ.


Spread the love

About Laxminews 24x7

Check Also

ಚಾಮುಂಡಿ ಬೆಟ್ಟಕ್ಕೆ ಎಲ್ಲಾ ಧರ್ಮದವರಿಗೂ ಪ್ರವೇಶವಿದೆ: ಡಿಸಿಎಂ

Spread the loveಬೆಂಗಳೂರು : ಚಾಮುಂಡಿ ಬೆಟ್ಟಕ್ಕೆ ಎಲ್ಲ ಧರ್ಮದವರಿಗೂ ಪ್ರವೇಶವಿದೆ. ಎಲ್ಲಾ ಸಮಾಜದವರು ಚಾಮುಂಡಿ ಬೆಟ್ಟಕ್ಕೆ ಹೋಗುತ್ತಾರೆ, ದೇವರ ಬಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ