Breaking News

ಅಂಕೋಲಾ ಹಾಗೂ ಭಟ್ಕಳ ನಿಲ್ದಾಣಗಳಲ್ಲಿ ಎಕ್ಸ್ ಪ್ರೆಸ್ ರೈಲುಗಳ ನಿಲುಗಡೆಗೆ ರೈಲ್ವೆ ಇಲಾಖೆ ಅನುಮತಿ

Spread the love

ಶಿರಸಿ: ಉತ್ತರ ಕನ್ನಡ ಸಂಸದ ಅನಂತಕುಮಾರ ಹೆಗಡೆ ಅವರ ಕೋರಿಕೆಯ ಮೇರೆಗೆ ಅಂಕೋಲಾ ಹಾಗೂ ಭಟ್ಕಳ ನಿಲ್ದಾಣಗಳಲ್ಲಿ ಎಕ್ಸ್ ಪ್ರೆಸ್ ರೈಲುಗಳ ನಿಲುಗಡೆಗೆ ರೈಲ್ವೆ ಇಲಾಖೆ ಅನುಮತಿ ನೀಡಿದೆ.

ಅಂಕೋಲಾ ನಿಲ್ದಾಣದಲ್ಲಿ ನಾಳೆ(ಮಾ.9)ಯಿಂದ ಕೊಚುವೆಲಿ- ಮುಂಬೈ ಎಕ್ಸ್ ಪ್ರೆಸ್ ರೈಲು ನಿಲುಗಡೆಯಾಗಲಿದೆ. ಭಟ್ಕಳ ನಿಲ್ದಾಣದಲ್ಲಿ ತಿರುವಂತನಪುರ-ಪನವೇಲ್ ನೇತ್ರಾವತಿ ಎಕ್ಸ್ ಪ್ರೆಸ್ ರೈಲು ನಿಲುಗಡೆಯಾಗಲಿದೆ.

ಈ ಮೂಲಕ ಅಂಕೋಲಾ‌ ಹಾಗೂ ಭಟ್ಕಳ ಭಾಗದ ಜನರ ದೀರ್ಘ ಕಾಲದ ಬೇಡಿಕೆಯನ್ನು ರೈಲ್ವೆ ಇಲಾಖೆ ಈಡೇರಿಸಿದಂತಾಗಿದೆ. ಈ ರೈಲುಗಳ ನಿಲುಗಡೆಗಾಗಿ ಈ ಹಿಂದೆ ಜನ ಮನವಿ ಮಾಡಿಕೊಂಡಿದ್ದ ಮೇರೆಗೆ ಅನಂತಕುಮಾರ ಹೆಗಡೆ ಅವರು ಬೇಡಿಕೆ ಈಡೇರಿಸಲು ಕೋರಿ ರೈಲ್ವೆ ಇಲಾಖೆಗೆ ಪತ್ರ ಬರೆದಿದ್ದರು. ಈ ರೈಲುಗಳ ನಿಲುಗಡೆಯಿಂದ ಕೇರಳ ಹಾಗೂ ಮುಂಬೈ ಕಡೆ ಹೋಗುವ ಹಾಗೂ ಬರುವ ಪ್ರಯಾಣಿಕರಿಗೆ ಅನುಕೂಲವಾಗಲಿದೆ.

ಅದೇ ರೀತಿ ಹಿಸ್ಸಾರ್-ಕೊಯಿಮತ್ತೂರು ರೈಲಿಗೆ ಕುಮಟಾದಲ್ಲಿ ನಿಲುಗಡೆ ಕುರಿತ ಆದೇಶ ಸದ್ಯವೇ ಹೊರಡುವ ನಿರೀಕ್ಷೆ ಇದೆ ಎಂದು ಸಂಸದರ ಅನಂತ ಕುಮಾರ್‌ ಹೆಗಡೆ ಕಚೇರಿ ಪ್ರಕಟಣೆ ತಿಳಿಸಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ