Breaking News

ಸಂಸದೆ ಸುಮಲತಾ ಇಂದು ಬಿಜೆಪಿಗೆ, ಬಿಜೆಪಿ ತೊರೆದ ಪುಟ್ಟಣ್ಣ ಕಾಂಗ್ರೆಸ್‌ಗೆ

Spread the love

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಈಗ ಪಕ್ಷಾಂತರ ಪರ್ವ ಜೋರಾಗಿ ಸದ್ದು ಮಾಡುತ್ತಿದೆ. ಆಡಳಿತಾರೂಢ ಬಿಜೆಪಿಗೆ ಈ ವಿಚಾರ ಈಗ ತೀವ್ರ ಪ್ರಮಾಣದಲ್ಲಿ ಒಳ ಏಟು ನೀಡಲಾರಂಭಿಸಿದ್ದು, ಪ್ರಬಲ “ವಿಕೆಟ್‌’ಗಳು ಉರುಳದಂತೆ ನೋಡಿಕೊಳ್ಳುವುದು ಕೇಸರಿ ಪಡೆಗೆ ಸವಾಲಾಗಿದೆ.

 

ಕಾಂಗ್ರೆಸ್‌ನಲ್ಲಿ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಸ್ಕ್ರೀನಿಂಗ್‌ ಕಮಿಟಿ ಸಭೆ ನಡೆಯುತ್ತಿರುವಾಗಲೇ ಬಿಜೆಪಿಯಿಂದ ವಲಸೆ ವಿಚಾರ ಸುದ್ದಿಯಾಗುತ್ತಿದೆ. ಈಗಾಗಲೇ ಪಕ್ಷದಿಂದ ಒಂದು ಕಾಲು ಹೊರಗಿಟ್ಟಿರುವ ಸಚಿವ ನಾರಾಯಣ ಗೌಡ ಜತೆಗೆ ಇನ್ನೂ ಮೂವರು ಸಚಿವರು ಬಿಜೆಪಿ ತೊರೆಯಲಿದ್ದಾರೆ ಎಂಬ ಸುದ್ದಿ ಬಲವಾಗಿದೆ. ಇದೆಲ್ಲದರ ನಡುವೆ ಮಂಡ್ಯ ಸಂಸದೆ ಸುಮಲತಾ ಬಿಜೆಪಿ ಸೇರುವುದಕ್ಕೆ ವೇದಿಕೆ ಸಿದ್ಧವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಮಂಡ್ಯ ಭೇಟಿಗೆ ಮುಂಚಿತವಾಗಿ ಈ ಪ್ರಕ್ರಿಯೆ ಪೂರ್ಣಗೊಳಿಸುವುದಕ್ಕೆ ಸಿದ್ಧತೆ ನಡೆದಿದೆ.


Spread the love

About Laxminews 24x7

Check Also

ಪ್ರತಿ ಟನ್ ಕಬ್ಬಿಗೆ​​ ಹೆಚ್ಚುವರಿ 50 ರೂ. ಕೊಡಲು ಸಾಧ್ಯವಿಲ್ಲ: ಸಕ್ಕರೆ ಮಿಲ್ಸ್ ಸಂಘಟನೆ ಅಧ್ಯಕ್ಷ

Spread the loveಬೆಂಗಳೂರು: ಪ್ರತಿ ಟನ್ ಕಬ್ಬಿಗೆ 3,200 ರೂ.‌ ಕೊಡಲು ಮಾತ್ರ ಸಾಧ್ಯ. 3,250 ರೂ. ಕೊಡುವುದು ಸಾಧ್ಯವಿಲ್ಲ ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ