Breaking News

ಅಪ್ಪು ಪುತ್ಥಳಿ ಮೆರವಣಿಗೆ ವೇಳೆ ಜೆಡಿಎಸ್ ಕಾರ್ಯಕರ್ತರು – ಪೊಲೀಸರ ಮಧ್ಯೆ ವಾಗ್ವಾದ; ಪಿಎಸ್‌ಐ ಕಾಲರ್ ಎಳೆದು ಹಲ್ಲೆ ಮಾಡಿದ ಶಾಸಕರ ಪುತ್ರ

Spread the love

ರಾಯಚೂರು: ಸಿಂಧನೂರಿನಲ್ಲಿ ನಿರ್ಮಾಣವಾಗಿರುವ ನೂತನ ರಂಗಮಂದಿರಕ್ಕೆ ಪುನೀತ್​ ರಾಜ್​​ಕುಮಾರ್ ಹೆಸರಿಡುವ ವಿಚಾರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ರಾಜಕೀಯ ಮಾಡುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಅಪ್ಪು ಪುತ್ಥಳಿ ಮೆರವಣಿಗೆ ವೇಳೆ ಜೆಡಿಎಸ್ ಕಾರ್ಯಕರ್ತರು ಹಾಗೂ ಪೊಲೀಸರ ಮಧ್ಯೆ ತಳ್ಳಾಟ ನಡೆದಿದ್ದು, ಪಿಎಸ್‌ಐ ಮಣಿಕಂಠ ಥಳಿತಕ್ಕೊಳಗಾಗಿದ್ದಾರೆ.

 

ಸಿಂಧನೂರು ನಗರದ ಸುಕಾಲಪೇಟೆ ರಸ್ತೆಯಲ್ಲಿ ನೂತನ ರಂಗ ಮಂದಿರ ನಿರ್ಮಾಣವಾಗಿದ್ದು, ಸಿಂಧನೂರು ಜೆಡಿಎಸ್ ಶಾಸಕ ವೆಂಕಟರಾವ್ ನಾಡಗೌಡ ಪುತ್ರ ಅಭಿಷೇಕ ನಾಡಗೌಡ ಪುನೀತ್ ರಾಜಕುಮಾರ್ ಹೆಸರಿಡಲು ಒತ್ತಾಯಿಸಿದ್ದಾರೆ. ಆದರೆ ಕಾಂಗ್ರೆಸ್ ಆಡಳಿತದಲ್ಲಿರುವ ನಗರಸಭೆ ಪುನೀತ್ ಹೆಸರಿಡಲು ವಿರೋಧ ವ್ಯಕ್ತಪಡಿಸಿದ್ದು, ಸ್ಥಳೀಯ ಕಲಾವಿದರ ಹೆಸರಿಡಲು ಮುಂದಾಗಿದೆ.

 

ಈ ವಿಚಾರವಾಗಿ ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವೆ ಗಲಾಟೆ ನಡೆದಿದ್ದು, ನಗರದ ಎಪಿಎಂಸಿಯಿಂದ ರಂಗಮಂದಿರದ ವರೆಗೆ ಅಪ್ಪು ಪುತ್ಥಳಿ ಮೆರವಣಿಗೆ ವೇಳೆ ವಾಗ್ವಾದ ನಡೆದಿದೆ. ಈ ವೇಳೆ ಶಾಸಕರ ಪುತ್ರ ಅಭಿಷೇಕ್ ನಾಡಗೌಡ ಸಿಂಧನೂರು ಗ್ರಾಮೀಣ ಠಾಣೆ ಪಿಎಸ್‌ಐ ಮಣಿಕಂಠ ಅವರ ಕಾಲರ್ ಪಟ್ಟಿ ಎಳೆದು, ಹಲ್ಲೆ ಮಾಡಿದ್ದಾನೆ.


Spread the love

About Laxminews 24x7

Check Also

ಆರ್​ಸಿಬಿ ಫೈನಲ್​ಗೇರಿದ ಖುಷಿಯಲ್ಲಿ ಪೆಟ್ರೋಲ್ ಚೀಲ ಸಿಡಿಸಿ ಸಂಭ್ರಮಾಚರಣೆ: ರಾಯಚೂರಿನಲ್ಲಿ 8 ಯುವಕರ ಬಂಧನ

Spread the loveರಾಯಚೂರು, : ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು (RCB) ಮೇ 29 ರಂದು ಪಂಜಾಬ್ ಕಿಂಗ್ಸ್ (PBKS) ವಿರುದ್ಧ ಭರ್ಜರಿ ಗೆಲ್ಲುವು ದಾಖಲಿಸಿ ಐಪಿಎಲ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ