Breaking News

ಹೆಚ್ಚು ಎಣ್ಣೆ ಕುಡಿದಿದ್ದಕ್ಕೆ ಗೆಳೆಯನ್ನ ಕೊಂದವರು ಅಂದರ್…………

Spread the love

ಬೆಂಗಳೂರು: ತಮಗಿಂತ ಹೆಚ್ಚು ಮದ್ಯ ಸೇವನೆ ಮಾಡಿದ್ದ ಗೆಳೆಯನನ್ನು ಕೊಂದ ಇಬ್ಬರನ್ನು ಬಂಧಿಸುವಲ್ಲಿ ಬೆಂಗಳೂರಿನ ಆರ್.ಟಿ.ನಗರ ಪೊಲೀಸರು ಯಶಸ್ವಿಯಾಗಿದ್ದಾರೆ.

ಮೇ 4ರಿಂದ ರಾಜ್ಯದಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿದೆ. ಮೇ 6ರಂದು ಮದ್ಯ ಖರೀದಿಸಿ ರಾಜೇಶ್, ಸುಜಿತ್ ಮತ್ತು ಕಿಶೋರ್ ಸೇರಿಕೊಂಡು ಪಾರ್ಟಿ ಮಾಡಿದ್ದರು. ಪಾರ್ಟಿ ಮಧ್ಯೆ ಹೆಚ್ಚು ಮದ್ಯ ತಮಗೆ ಬೇಕೆಂದು ಮೂವರು ಕಿತ್ತಾಡಿಕೊಂಡಿದ್ದಾರೆ.

ಮದ್ಯ ಖರೀದಿಗೆ ಕಿಶೋರ್ ಹೆಚ್ಚು ನೀಡಿಲ್ಲ ಎಂದು ರಾಜೇಶ್ ಮತ್ತು ಸುಜಿತ್ ಕಿಡಿಕಾರಿದ್ದಾರೆ. ಹೆಚ್ಚು ಹಣ ನೀಡದೇ ಅಧಿಕ ಮದ್ಯ ಕುಡಿದ ಎಂಬ ಕಾರಣಕ್ಕೆ ರಾಜೇಶ್ ಮತ್ತು ಸುಜಿತ್ ಸೇರಿಕೊಂಡು ಗೆಳೆಯ ಕಿಶೋರ್ ನನ್ನು ಕೊಲೆಗೈದು ಪರಾರಿಯಾಗಿದ್ದರು. ಈ ಸಂಬಂಧ ಆರ್.ಟಿ.ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು


Spread the love

About Laxminews 24x7

Check Also

ಸಿಲಿಂಡರ್ ದರ ಹೆಚ್ಚಳಕ್ಕೆ ಕಾಂಗ್ರೆಸ್ ಆಕ್ರೋಶ – ಖಾಲಿ ಸಿಲಿಂಡರ್ ಹಿಡಿದು ಪ್ರತಿಭಟನೆ

Spread the loveಬೆಂಗಳೂರು: ಸಿಲಿಂಡರ್ ದರ ಹೆಚ್ಚಳಕ್ಕೆ  ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದ್ದು, ಕೆಪಿಸಿಸಿ ಕಚೇರಿ ಮುಂದೆ ಕೇಂದ್ರ ಸರ್ಕಾರದ ವಿರುದ್ಧ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ