ಕೊರೊನಾ ವಾರಿಯರ್ಸ್‍ಗೆ ಪಾದ ಪೂಜೆ ಮಾಡಿ ದಾದಿಯರ ದಿನಾಚರಣೆ ಆಚರಣೆ

Spread the love

ಹಾವೇರಿ: ಕೊರೊನಾ ವಿರುದ್ಧ ಹೋರಾಟ ಮಾಡುತ್ತಿರುವ ವಾರಿಯರ್ಸ್ ಕಾಲು ತೊಳೆದು, ಕುಂಕುಮ ಹಚ್ಚಿ, ಪೂಜೆ ಮಾಡಿದ ಘಟನೆ ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಅಕ್ಕಿಆಲೂರು ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೆಲಸ ಮಾಡುತ್ತಿರುವ ನಾಲ್ವರು ದಾದಿಯರಿಗೆ ಗ್ರಾಮದ ವಿಶ್ವನಾಥ ಹಿರೇಮಠ ಮತ್ತು ಕೃಷ್ಣ ಈಳಿಗೇರ ಸ್ನೇಹ ಬಳಗದ ವತಿಯಿಂದ ಪಾದ ಪೂಜೆ ನೆರವೇರಿಸಲಾಗಿದೆ. ಈ ಮೂಲಕ ಸ್ನೇಹ ಬಳಗದ ಸದಸ್ಯರು ಕೊರೊನಾ ವಾರಿಯರ್ಸ್ ಕಾರ್ಯಕ್ಕೆ ಧನ್ಯವಾದ ಅರ್ಪಿಸಿದ್ದಾರೆ.

ಕೊರೊನಾ ವಿರುದ್ಧ ಹೋರಾಟ ಮಾಡುತ್ತಿರುವ ದಾದಿಯರ ಕಾರ್ಯವನ್ನು ಶ್ಲಾಘಿಸಿ ನಾಲ್ವರಿಗೂ ಸೀರೆಯನ್ನು ಉಡುಗೊರೆಯಾಗಿ ನೀಡಿ ಗೌರವ ಸಲ್ಲಿಸಿದ್ದಾರೆ. ದಾದಿಯರ ದಿನವಾದ ಇಂದು ತಮ್ಮ ಕೆಲಸವನ್ನ ಗುರ್ತಿಸಿ ಈ ರೀತಿ ಗೌರವ ಸಲ್ಲಿಸಿದ್ದಕ್ಕೆ ಕೊರೊನಾ ವಾರಿಯರ್ಸ್ ಸಹ ಸ್ನೇಹ ಬಳಗದ ಸದಸ್ಯರಿಗೆ ಧನ್ಯವಾದ ತಿಳಿಸಿದ್ದಾರೆ.


Spread the love

About Laxminews 24x7

Check Also

ಭೀಕರ ಅಪಘಾತ – ದೇವರ ದರ್ಶನಕ್ಕೆ ಹೋಗಿ ಬರುತ್ತಿದ್ದ ನವದಂಪತಿ ಸ್ಥಳದಲ್ಲೇ ಸಾವು

Spread the loveಹಾವೇರಿ: ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ನವದಂಪತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ