Breaking News
Home / ರಾಜಕೀಯ / ಬಿಜೆಪಿ ಸಂಸದರಾಗಿದ್ದ ಪ್ರಬಲ ಪಂಚಮಸಾಲಿ ಮುಖಂಡ ಮರಳಿ ಕಾಂಗ್ರೆಸ್​ಗೆ!

ಬಿಜೆಪಿ ಸಂಸದರಾಗಿದ್ದ ಪ್ರಬಲ ಪಂಚಮಸಾಲಿ ಮುಖಂಡ ಮರಳಿ ಕಾಂಗ್ರೆಸ್​ಗೆ!

Spread the love

ಹಾವೇರಿ: ಮಾಜಿ ಸಂಸದ ಮಂಜುನಾಥ್ ಕುನ್ನೂರು ಕಾಂಗ್ರೆಸ್ ಸೇರ್ಪಡೆಗೆ ನಿರ್ಧಾರ ಮಾಡಿದ್ದು ಕೆಪಿಸಿಸಿ ಅದ್ಯಕ್ಷ ಡಿಕೆಶಿ ಹಾಗೂ ಸಿದ್ದರಾಮಯ್ಯ ಭೇಟಿಗೆ ತೆರಳಿದ್ದಾರೆ.

ಇವರು 1989 – 1994, 1994-1999 ಅವಧಿಯಲ್ಲಿ ಶಿಗ್ಗಾವಿ ಕ್ಷೇತ್ರದ ಶಾಸಕರಾಗಿದ್ದರು.

ನಂತರ 2004ರಲ್ಲಿ ಧಾರವಾಡ ದಕ್ಷಿಣ ಕ್ಷೇತ್ರದಿಂದ ಬಿಜೆಪಿ ಸಂಸದರಾಗಿದ್ದರು. ಮುಂದೆ 2009ರಲ್ಲಿ ಕಾಂಗ್ರೆಸ್​ನಿಂದ ಲೋಕಸಭೆ ಚುನಾವಣೆಯಲ್ಲಿ ಸ್ಪರ್ದಸಿ ಪ್ರಹ್ಲಾದ್ ಜೋಶಿ ವಿರುದ್ಧ ಸೋತಿದ್ದರು.

ನಂತರ 2018ರಲ್ಲಿ ಮತ್ತೆ ಬಿಜೆಪಿ ಸೇರಿದ್ದ ಇವರು ಇದೀಗ ವಾಪಸ್​ ಕಾಂಗ್ರೆಸ್​ಗೆ ಹೋಗುತ್ತಿದ್ದಾರೆ. ಈ ಮೂಲಕ ಕಾಂಗ್ರೆಸ್​, ಸಿಎಂ ಸ್ವಕ್ಷೇತ್ರದಲ್ಲಿ ಆಪರೇಷನ್ ಹಸ್ತ ಮಾಡಿದ ಹಾಗೆ ಆಗಿದೆ. ನಾಜಿ ಸಂಸದ ಮಂಜುನಾಥ್ ಕುನ್ನೂರು ಪ್ರಬಲ ಪಂಚಮಸಾಲಿ ಮುಖಂಡರೂ ಹೌದು. ಅವರೊಂದಿಗೆ, ಅವರ ಪುತ್ರ ಚಂದನ ಕುನ್ನೂರು ಕೂಡ ಕಾಂಗ್ರೆಸ್​ ಸೇರುತ್ತಿದ್ದಾರೆ.

ಇಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಸೇರ್ಪಡೆಯಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಹೀಗೆ ಶಿಗ್ಗಾವಿಯಲ್ಲಿ ಶಾಕ್ ನೀಡಿರುವ ಕಾಂಗ್ರೆಸ್, ಸಿಎಂ ವಿರುದ್ಧ ಪಂಚಮಸಾಲಿ ‌ಅಸ್ತ್ರ ಪಯೋಗ ಮಾಡುತ್ತಿದೆ.


Spread the love

About Laxminews 24x7

Check Also

ಆರೋಪಿ ಫಯಾಜ್‌ ನ್ಯಾಯಾಂಗ ಬಂಧನಕ್ಕೆ!

Spread the loveಹುಬ್ಬಳ್ಳಿ : ಕಾಲೇಜು ಆವರಣದಲ್ಲಿ ವಿದ್ಯಾರ್ಥಿನಿಯ ಹತ್ಯೆ(student murder) ಆರೋಪಿ ಫಯಾಜ್‌(Fayaz) ಎಂಬುವವನನ್ನ ಕೋರ್ಟ್‌ ಇಂದು ನ್ಯಾಯಾಂಗ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ