Breaking News
Home / ರಾಜಕೀಯ / BJPಯಿಂದ ಜೆಡಿಎಸ್​ಗೆ ಮರಳಿದ ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ;

BJPಯಿಂದ ಜೆಡಿಎಸ್​ಗೆ ಮರಳಿದ ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ;

Spread the love

ಬೆಂಗಳೂರು: ಬಸವಕಲ್ಯಾಣ ಕ್ಷೇತ್ರದ ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಪಕ್ಷದ ಶಾಲು ಹಾಕುವ ಮೂಲಕ ಮಾಜಿ ಮುಖ್ಯಮಂತ್ರಿ ಎಚ್​ ಡಿ ಕುಮಾರಸ್ವಾಮಿ ಖೂಬಾ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡಿದ್ದಾರೆ.

 

 

ಬಸವಕಲ್ಯಾಣ ಕ್ಷೇತ್ರದ ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ, ಜೆ.ಪಿ.ನಗರದಲ್ಲಿರುವ ಕುಮಾರಸ್ವಾಮಿ ಅವರ ನಿವಾಸದಲ್ಲಿ ಪಕ್ಷ ಸೇರ್ಪಡೆಗೊಂಡಿದ್ದಾರೆ.

 

ಖೂಬಾ ಅವರು ಈ ಹಿಂದೆ ಕೂಡಾ ಜೆಡಿಎಸ್ ಪಕ್ಷದಲ್ಲಿಯೇ ಇದ್ದವರು. ಜೆಡಿಎಸ್ ಪಕ್ಷದಿಂದ ಬಸವ ಕಲ್ಯಾಣ ಕ್ಷೇತ್ರವನ್ನು ಎರಡು ಅವಧಿಗೆ ಪ್ರತಿನಿಧಿಸಿದ್ದರು. ಕಾರಣಾಂತರಗಳಿಂದ ಅವರು ಪಕ್ಷ ಬಿಟ್ಟಿದ್ದರು. ಕಳೆದ ಚುನಾವಣೆಯಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆ ಆಗಿದ್ದರು. 2018ರಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದು ಕಾಂಗ್ರೆಸ್​​ ಅಭ್ಯರ್ಥಿ ಬಿ. ನಾರಾಯಣ ರಾವ್​ ವಿರುದ್ಧ ಸೋಲುಂಡಿದ್ದರು. 2019ರಲ್ಲಿ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಟಿಕೆಟ್​ ಆಕಾಂಕ್ಷಿಯಾಗಿದ್ದು, ಆದರೆ ಬಿಜೆಪಿ ಖೂಬಾ ಅವರಿಗೆ ಟಿಕೆಟ್​ ನೀಡದೆ ಶರಣು ಸಲಗಾರಗೆ ಟಿಕೆಟ್​ ನೀಡಲಾಗಿತ್ತು. ಇದರಿಂದ ಅವರು ಅಸಮಾಧಾನಗೊಂಡಿದ್ದರು. ಈಗ ಮರಳಿ ತಮ್ಮ ಮನೆಗೆ ವಾಪಸ್ ಆಗಿದ್ದಾರೆ.


Spread the love

About Laxminews 24x7

Check Also

ಸಿದ್ದರಾಮಯ್ಯನವರೇ ಅಧಿಕಾರದಿಂದ ಇಳೀರಿ, 24 ಗಂಟೆಯಲ್ಲಿ ಕಸ್ಟಡಿಗೆ ತೆಗೆದುಕೊಳ್ಳುತ್ತೇವೆ. : ಆರ್. ಅಶೋಕ್ ಸವಾಲು

Spread the loveಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಆರ್ ಅಶೋಕ್ ಸಿಎಂ ಸಿದ್ದರಾಮಯ್ಯ ಹಾಗೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ