Breaking News

ಚುನಾವಣಾ ಅಖಾಡದಿಂದ ಹಿಂದೆ ಸರಿದ ಯತೀಂದ್ರ ಸಿದ್ದರಾಮಯ್ಯ

Spread the love

ಮಂಡ್ಯ: ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಕ್ಷೇತ್ರ ಬಿಟ್ಟುಕೊಟ್ಟ ಮೇಲೆ ವರುಣಾ ಹಾಲಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂಬ ಕುತೂಹಲ ಮೂಡಿತ್ತು. ಇದೀಗ ಯತೀಂದ್ರ ಸಿದ್ದರಾಮಯ್ಯ ಚುನಾವಣಾ ಅಖಾಡದಿಂದಲೇ ಹಿಂದೆ ಸರಿಯುವ ಮಾತುಗಳನ್ನಾಡುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

 

ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯತೀಂದ್ರ ಸಿದ್ದರಾಮಯ್ಯ, ನಾನು ಈ ಬಾರಿ ಚುನಾವಣೆಯಲ್ಲಿ ಸ್ಪರ್ಧೆ ಮಾಡಲ್ಲ ಎಂದು ಹೇಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

ವರುಣಾ ಅಥವಾ ಬೇರೆ ಯಾವುದೇ ಕ್ಷೇತ್ರಗಳಿಂದಲೂ ನಾನು ಚುನಾವಣೆಗೆ ಸ್ಪರ್ಧಿಸಲ್ಲ. ಈಬಾರಿ ಚುನಾವಣೆಗೆ ನಾನು ಸ್ಪರ್ಧೆ ಮಾಡುವುದಿಲ್ಲ. ತಂದೆಯವರ ಪರವಾಗಿ ಜನವರಿಯಿಂದ ಕ್ಷೇತ್ರದಲ್ಲಿ ಪ್ರಚಾರ ಮಾಡಿದ್ದೆ. ಅವರ ಪರವಾಗಿ ಕೆಲಸ ಮಾಡುತ್ತೇನೆ. ಇದು ತಂದೆಯವರ ಕೊನೇ ಚುನಾವಣೆ. ಹಾಗಾಗಿ ಅವರು ವರುಣಾದಲ್ಲಿ ನಿಲ್ಲಬೇಕು ಎಂಬುದು ಜನರ ಆಶಯ ಎಂದು ಹೇಳಿದರು.


Spread the love

About Laxminews 24x7

Check Also

ರಾಜ್ಯದಲ್ಲಿರುವ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಆಪರೇಷನ್ ಆರಂಭ

Spread the loveಬೆಂಗಳೂರು: ಬಾಂಗ್ಲಾ ದೇಶೀಯರು ಸೇರಿದಂತೆ ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರು ವವರನ್ನು ಪತ್ತೆ ಹಚ್ಚಿ, ಗಡೀಪಾರು ಮಾಡುವ ಕಾರ್ಯಾಚರಣೆಯನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ