Breaking News

ಶಿವಲಿಂಗೇಗೌಡ ಶಾಸಕ ಸ್ಥಾನಕ್ಕೆ ರಾಜಿನಾಮೆ

Spread the love

ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಪಕ್ಷಾಂತರ ಪರ್ವ ಚುರುಕುಗೊಂಡಿದ್ದು, ದಳಪತಿಗಳಿಗೆ ಮತ್ತೊಂದು ಆಘಾತ ಎದುರಾಗಿದೆ. ಜೆಡಿಎಸ್ ಹಿರಿಯ ಶಾಸಕ ಶಿವಲಿಂಗೇಗೌಡ ತಮ್ಮ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.

ಅರಸಿಕೆರೆ ಕ್ಷೇತ್ರದ ಜೆಡಿಎಸ್ ಶಾಸಕ ಶಿವಲಿಂಗೇಗೌಡ 400ಕ್ಕೂ ಹೆಚ್ಚು ಕಾರ್ಯಕರ್ತರ ಜೊತೆ ಉತ್ತರ ಕನ್ನಡ ಜಿಲ್ಲೆ ಶಿರಸಿಯಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಭೇಟಿಯಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಶಿವಲಿಂಗೇಗೌಡ ಅಪಾರ ಬೆಂಬಲಿಗರೊಂದಿಗೆ ಕಾಂಗ್ರೆಸ್ ಸೇರಲು ಸಜ್ಜಾಗಿದ್ದು, ಅರಸಿಕೆರೆಯಿಂದ ಕೈ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಸಾಧ್ಯತೆ ಇದೆ.


Spread the love

About Laxminews 24x7

Check Also

ಕಬ್ಬು ಬೆಳೆಗಾರರ ಕೂಗಿಗೆ ಸ್ಪಂದಿಸಿದ ಸಚಿವ ಸಂಪುಟ ಸಭೆ: ಸುದೀರ್ಘ 3 ಗಂಟೆ ಚರ್ಚೆ*

Spread the love ಕಬ್ಬು ಬೆಳೆಗಾರರ ಕೂಗಿಗೆ ಸ್ಪಂದಿಸಿದ ಸಚಿವ ಸಂಪುಟ ಸಭೆ: ಸುದೀರ್ಘ 3 ಗಂಟೆ ಚರ್ಚೆ* *ವಿಧಾನಸೌಧದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ