Breaking News

ಬಸವಜಯ ಮೃತ್ಯುಂಜಯ ಸ್ವಾಮೀಜಿಯವರಿಗೆ ಬೆದರಿಕೆ;:

Spread the love

ಬೆಂಗಳೂರು: ಪಂಚಮಸಾಲಿ ಸಮುದಾಯಕ್ಕೆ 2A ಮಿಸಲಾತಿಗಾಗಿ ಆಗ್ರಹಿಸಿ ಹೋರಾಟ ನಡೆಸಿದ್ದ ಕೂಡಲಸಂಗಮ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರಿಗೆ ಧಮ್ಕಿ ಹಾಕಿ ಬೆದರಿಕೆಯೊಡ್ದುತ್ತಿದ್ದಾರೆ ಎಂದು ಎಂದು ಶಾಸಕ ಅರವಿಂದ್ ಬೆಲ್ಲದ್ ಗಂಭೀರ ಆರೋಪ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಅರವಿಂದ್ ಬೆಲ್ಲದ್, ಹೋರಾಟದಲ್ಲಿ ಭಾಗಿಯಾಗಿದ್ದ ಕೆಲ ರಾಜಕೀಯ ನಾಯಕರೇ ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರಿಗೆ ಕರೆ ಮಾಡಿ ಬೆದರಿಕೆ ಹಾಕಿದ್ದಾರೆ. ಈ ರೀತಿ ಧಮ್ಕಿ ಹಾಕಿದ್ದು ಯಾರು ಎಂಬುದು ನಮ್ಮ ಇಡೀ ಸಮುದಾಯಕ್ಕೆ ಗೊತ್ತಿದೆ. ಮತ್ತೆ ಧಮ್ಕಿ ಹಾಕಿದರೆ ಏನು ಮಾಡಬೇಕು ಎಂಬುದೂ ನಮಗೆ ಗೊತ್ತಿದೆ ಎಂದು ಎಚ್ಚರಿಸಿದ್ದಾರೆ.

ನಾವು ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಘೋಷಿವ ಮೂಲಕ ಮೂಗಿಗೆ ತುಪ್ಪ ಸವರಿಲ್ಲ, ಈ ರೀತಿ ಕಾಂಗ್ರೆಸ್ ನಮ್ಮ ವಿರುದ್ಧ ಅಪಪ್ರಚಾರ ಮಾಡುತ್ತಿದೆ. ಹೋರಾಟದಲ್ಲಿ ಭಾಗಿಯಾಗಿದ್ದ ಕೆಲ ನಾಯಕರೇ ಇಂದು ಬೆದರಿಕೆ ಹಾಕುತ್ತಿದ್ದಾರೆ ಎಂದು ಪರೋಕ್ಷವಾಗಿ ವಿಜಯಾನಂದ ಕಾಶಪ್ಪನವರ್ ಹಾಗೂ ವಿನಯ್ ಕುಲ್ಕರ್ಣಿ ವಿರುದ್ಧ ಬೆಲ್ಲದ್ ಆರೋಪ ಮಾಡಿದ್ದಾರೆ.


Spread the love

About Laxminews 24x7

Check Also

ವಸ್ತುಗಳನ್ನು ಸಾಗಿಸುತ್ತಿದ್ದಾಗ ಏಕಾಏಕಿ ಕುಸಿದ ಲಿಫ್ಟ್‌ – ಇನ್‌ಸ್ಟಾ ಮಾರ್ಟ್‌ ಉದ್ಯೋಗಿ ಸಾವು

Spread the loveಮಂಗಳೂರು: ವಸ್ತುಗಳನ್ನು ಸಾಗಿಸುತ್ತಿದ್ದಾಗ ಏಕಾಏಕಿ ಲಿಫ್ಟ್‌ ಕುಸಿದು ಇನ್‌ಸ್ಟಾ ಮಾರ್ಟ್‌ ಉದ್ಯೋಗಿ ಸಾವನ್ನಪ್ಪಿರುವ ಘಟನೆ ಮಂಗಳೂರಿನ  ಕುಂಟಿಕಾನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ