Breaking News

ಸಿಎಂ ಬೊಮ್ಮಾಯಿ ಅವರಿಗೆ ಬೆಂಬಲ ಕೊಡಲು ನಾನು ಸಿದ್ಧ: ಕಿಚ್ಚ ಸುದೀಪ್

Spread the love

ಬೆಂಗಳೂರು: ಕಿಚ್ಚ ಸುದೀಪ್ ರಾಜಕೀಯ ವ್ಯಕ್ತಿಯಲ್ಲ, ಅವರು ಚಿತ್ರರಂಗದಲ್ಲಿರುವ ವ್ಯಕ್ತಿ ಅವರಿಂದು ತಮ್ಮ ನಿಲುವು, ಮನದಾಳದ ಮಾತನ್ನು ಹಂಚಿಕೊಳ್ಳಲಿದ್ದಾರೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದರು.

ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಟ ಕಿಚ್ಚ ಸುದೀಪ್, ಬೊಮ್ಮಾಯಿ ಅವರನ್ನು ಚಿಕ್ಕಂದಿನಿಂದಲೂ ನೊಡಿದ್ದೇನೆ. ಚಿತ್ರರಂಗದ ಕಷ್ಟದ ದಿನಗಳಲ್ಲಿ ಕೆಲವರು ನನ್ನ ಬೆನ್ನಿಗೆ ನಿಂತಿದ್ದರು. ಅವರಲ್ಲಿ ಬೊಮ್ಮಾಯಿ ಕೂಡ ಒಬ್ಬರು. ಸಿಎಂ ಬೊಮ್ಮಾಯಿ ಅವರಿಗೆ ಬೆಂಬಲ ಕೊಡಲು ನಾನು ಸಿದ್ಧ. ಬೊಮ್ಮಾಯಿ ಅವರ ವ್ಯಕ್ತಿತ್ವಕ್ಕೆ ನಾನು ಬೆಲೆ ಕೊಡುತ್ತೇನೆ. ಇಲ್ಲಿ ರಾಜಕೀಯ ಬರಲ್ಲ. ಒಬ್ಬ ವ್ಯಕ್ತಿಯ ವಿಚಾರವಾಗಿ ಮಾತನಾಡುತ್ತಿದ್ದೇನೆ. ನಾನು ಬೊಮ್ಮಾಯಿ ಅಂಕಲ್ ಗೆ ಬೆಂಬಲ ಕೊಡುತ್ತಿದ್ದೇನೆ ಎಂದರು.

ಬೊಮ್ಮಾಯಿ ಅವರು ಈ ಚುನಾವಣೆಯಲ್ಲಿ ನಿನ್ನಿಂದ ಈ ಕೆಲಸವಾಗಬೇಕು ಎಂದರೆ ಮಾಡಲು ನಾನು ಸಿದ್ಧನಿದ್ದೇನೆ. ಹಣಕ್ಕಾಗಿ ನಾನು ಅವರಿಗೆ ಬೆಂಬಲ ನೀಡುತ್ತಿಲ್ಲ. ಹಣಗಳಿಸಲು ನನಗೆ ಸಾಮರ್ಥ್ಯ ಇದೆ, ಬೇರೆ ಅವಕಾಶವಿದೆ ಎಂದು ಅವರು ಹೇಳಿದರು.

ನಾನು ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಯಾವುದೇ ಕಾರಣಕ್ಕೂ ರಾಜಕೀಯ ಪ್ರವೇಶ ಮಾಡಲ್ಲ. ಅನಿವಾರ್ಯಕಾರಣಗಳಿಗೆ ಚುನಾವಣೆಗೆ ನಿಲ್ಲುವ ವ್ಯಕ್ತಿಯೂ ಅಲ್ಲ. ಹಣಕ್ಕಾಗಿ ನಾನು ಚುನಾವಣ ಪ್ರಚಾರ ಮಾಡುತ್ತಿಲ್ಲ. ಎಲ್ಲರ ಪರ ಚುನಾವಣೆ ಪ್ರಚಾರ ಮಾಡಲು ಆಗಲ್ಲ. ಸಿಎಂ ಬೊಮ್ಮಾಯಿ ಅವರು ಯಾರ ಪರ ಹೇಳುತ್ತಾರೋ ಅವರ ಪರ ಪ್ರಚಾರ ಮಾಡುತ್ತೇನೆ ಎಂದರು.


Spread the love

About Laxminews 24x7

Check Also

ವರದಕ್ಷಿಣೆ ಕಿರುಕುಳ ಆರೋಪ, ಐಎಸ್‌ಡಿ ಡಿವೈಎಸ್‌ಪಿ ವಿರುದ್ಧ ಎಫ್ಐಆರ್

Spread the love ಬೆಂಗಳೂರು : ಡಿವೈಎಸ್‌ಪಿಯೊಬ್ಬರ ವಿರುದ್ಧ ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. 41 ವರ್ಷದ ಮಹಿಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ