Breaking News

ಸುದೀಪ್ ನಟನೆಯ ಶೋ, ಭಾವಚಿತ್ರವಿರುವ ಜಾಹೀರಾತು ಪ್ರಸಾರಕ್ಕೆ ತಡೆ ನೀಡಿ: ಜೆಡಿಎಸ್ ನಿಂದ ಚುನಾವಣಾ ಆಯೋಗಕ್ಕೆ ದೂರು

Spread the love

ಬೆಂಗಳೂರು: ಈಗಾಗಲೇ ವಕೀಲರು, ಕೆ ಆರ್ ಎಸ್ ಪಕ್ಷದಿಂದ ನಟ ಸುದೀಪ್ ಚಿತ್ರ, ಶೋಗಳಿಗೆ ಚುನಾವಣಾ ನೀತಿಸಂಹಿತೆಯ ಕಾರಣ ನಿರ್ಬಂಧಿಸುವಂತೆ ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿತ್ತು. ಈ ಬೆನ್ನಲ್ಲೇ ಇಂದು ಜೆಡಿಎಸ್ ಪಕ್ಷವೂ ದೂರು ನೀಡಿದೆ.

ಈ ಕುರಿತಂತೆ ಜನತಾದಳ ಕಾನೂನು ವಿಭಾಗದಿಂದ ರಾಜ್ಯ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದು, ದೂರಿನಲ್ಲಿ ಕನ್ನಡದ ನಟ ಕಿಚ್ಚ ಸುದೀಪ್ ಅವರು ಪ್ರಸ್ತುತ ಬಿಜೆಪಿಯ ಸ್ಟಾರ್ ಪ್ರಚಾರಕರಾಗಿ ಗುರುತಿಸಿಕೊಂಡಿದ್ದಾರೆ. ಆದ್ದರಿಂದ ಅವರ ಸಿನೆಮಾ, ಜಾಹೀರಾತು, ಪೋಸ್ಟರ್ ಮುಂತಾದುವುಗಳು ಬಿತ್ತರಿಸುವ ಮೂಲಕ ಮತದ ಮೇಲೆ ಪ್ರಭಾವ ಬೀರುತ್ತೆ ಎಂಬ ಹಿನ್ನೆಲೆಯಲ್ಲಿ ಚುನಾವಣೆ ಮುಗಿಯುವವರೆಗೆ ಸುದೀಪ್ ನಟನೆಯ ಯಾವುದೇ ಶೋ ಮತ್ತು ಅವರ ಭಾವಚಿತ್ರವಿರುವ ಜಾಹೀರಾತುಗಳ ಪ್ರಸಾರಕ್ಕೆ ತಡೆ ಹಿಡಿಯುವಂತೆ ಕೋರಲಾಗಿದೆ.

ಅಂದಹಾಗೇ ನಟ ಸುದೀಪ್ ಸಿಎಂ ಬಸವರಾಜ ಬೊಮ್ಮಾಯಿ ಪರವಾಗಿ, ಅವರು ಹೇಳಿದಂತವರ ಪರವಾಗಿ ಚುನಾವಣಾ ಸ್ಟಾರ್ ಕ್ಯಾಂಪೇನ್ ಮಾಡುವುದಾಗಿ ಹೇಳಿದ್ದರು. ನನ್ನ ಕಷ್ಟ ಕಾಲದಲ್ಲಿ ಬೊಮ್ಮಾಯಿ ಮಾಮ ಆಗಿದ್ದಾರೆ. ಹೀಗಾಗಿ ಅವರಿಗೆ ಈ ಸಂದರ್ಭದಲ್ಲಿ ಸಪೋರ್ಟ್ ಮಾಡುವ ಸಲುವಾಗಿ ತಾನು ಚುನಾವಣಾ ಪ್ರಚಾರ ಮಾಡುತ್ತೇನೆ. ಯಾವುದೇ ಕಾರಣಕ್ಕೂ ರಾಜಕೀಯಕ್ಕೆ ಬರೋದಿಲ್ಲ ಎಂಬುದಾಗಿ ತಿಳಿಸಿದ್ದರು. ಈ ಬೆನ್ನಲ್ಲೇ ಅವರ ವಿರುದ್ಧ ಜೆಡಿಎಸ್ ಸೇರಿದಂತೆ ಅನೇಕರು ಅವರ ನಟನೆಯ ಚಿತ್ರ, ಶೋ ನಿರ್ಬಂಧಿಸುವಂತೆ ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿದೆ


Spread the love

About Laxminews 24x7

Check Also

2 ವರ್ಷಗಳಿಂದ ಆರಂಭವಾಗದ ಶುದ್ಧ ನೀರಿನ ಘಟಕಗಳು

Spread the loveಹಾವೇರಿ: ನಗರದ ನಿವಾಸಿಗಳಿಗೆ ಶುದ್ಧ ಕುಡಿಯುವ ನೀರು ಸಿಗಲಿ ಎಂದು ಶಾಸಕರ ಅನುದಾನದಲ್ಲಿ ಆರು ಶುದ್ಧ ಕುಡಿಯುವ ನೀರಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ