Breaking News

ಸರ್ಕಾರಿ ಬಸ್ ಹರಿದ ಪರಿಣಾಮ ಸ್ಥಳದಲ್ಲೇ 2 ವರ್ಷದ ಮಗು ಸಾವು ; ಸ್ಥಳೀಯರಿಂದ ಬಸ್ ಗಾಜು ಪುಡಿಪುಡಿ.!

Spread the love

ಬೆಳಗಾವಿ : ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಪರಮಾನಂದವಾಡಿ ಗ್ರಾಮದಲ್ಲಿ ಸರ್ಕಾರಿ ಬಸ್ ಹರಿದ ಪರಿಣಾಮ ಸ್ಥಳದಲ್ಲೇ 2 ವರ್ಷದ ಮಗು ಸಾವಿಗೀಡಾದ ಘಟನೆ ನಡೆದಿದೆ.

ಮೃತ ಮಗು ಶ್ಲೋಕ ಅಶೋಕ ತುಳಸಿಗೇರಿ (2) ಎಂದು ತಿಳಿದುಬಂದಿದೆ.

ಪರಮಾನಂದವಾಡಿಯಿಂದ ರಾಯಬಾಗ ಪಟ್ಟಣಕ್ಕೆ ತೆರಳುತ್ತಿದ್ದ ಬಸ್​, ಮಗು ರಸ್ತೆ ದಾಟುವಾಗ ಹರಿದಿದೆ ಎನ್ನಲಾಗಿದೆ. ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ ಎಂದು ಆರೋಪಿಸಿ ಸ್ಥಳೀಯರು ಬಸ್ಸಿನ ಗಾಜುಗಳನ್ನು ಪುಡಿಪುಡಿ ಮಾಡಿ ಆಕ್ರೋಶ ವ್ಯಕ್ತಪಡಿಸಿದರು.

ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗುತ್ತಿದ್ದಂತೆ ಸ್ಥಳಕ್ಕೆ ಕುಡಚಿ ಪೊಲೀಸರು ಆಗಮಿಸಿ ಪ್ರತಿಭಟನಕಾರರನ್ನು ಸಮಾಧಾನಪಡಿಸಿದರು.

ಅಪಘಾತ ಸಂಭವಿಸುತ್ತಿದ್ದಂತೆ ಚಾಲಕ ಸ್ಥಳದಿಂದ ಎಸ್ಕೇಪ್ ಆಗಿದ್ದು, ಈ ಕುರಿತು ಕುಡಚಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಉಡುಪಿ: ಸೆಪ್ಟೆಂಬರ್ 7ರಂದು ಖಗ್ರಾಸ ಚಂದ್ರಗ್ರಹಣ; ಕೆಂಬಣ್ಣದ ಚಂದಿರನ ದರ್ಶನ

Spread the love ಉಡುಪಿ: ಸೆ.7ರ ಹುಣ್ಣಿಮೆಯ ರಾತ್ರಿ ಖಗ್ರಾಸ ಚಂದ್ರಗ್ರಹಣ ಸಂಭವಿಸಲಿದೆ. ಖಗ್ರಾಸ ಚಂದ್ರ ಗ್ರಹಣದ ವೇಳೆ, ಚಂದ್ರನು ತಾಮ್ರದಂತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ