Breaking News

ಬಿಜೆಪಿಯಲ್ಲಿ ಟಿಕೆಟ್ ಘೋಷಣೆಗೂ ಮುನ್ನವೇ ನಿವೃತ್ತಿ ಪರ್ವ ಆರಂಭವಾಗಿದ್ದು, ಘಟಾನುಘಟಿ ನಾಯಕರೇ ರಾಜಕೀಯ ನಿವೃತ್ತಿ

Spread the love

ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪದಲ್ಲಿರುವಾಗಲೇ ರಾಜ್ಯ ಬಿಜೆಪಿಯಲ್ಲಿ ಟಿಕೆಟ್ ಘೋಷಣೆಗೂ ಮುನ್ನವೇ ನಿವೃತ್ತಿ ಪರ್ವ ಆರಂಭವಾಗಿದ್ದು, ಘಟಾನುಘಟಿ ನಾಯಕರೇ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ.

ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಕೈತಪ್ಪುವ ಭೀತಿಯಲ್ಲಿ ಸಾಲು ಸಾಲು ಬಿಜೆಪಿ ಮುಖಂಡರು ಚುನಾವಣೆಯಿಂದ ದೂರ ಉಳಿಯಲು ತೀರ್ಮಾನಿಸಿದ್ದಾರೆ. ಎಸ್.ಎ.ರವೀಂದ್ರನಾಥ್, ಹಾಲಾಡಿ ಶ್ರೀನಿವಾಸ್ ಶೆಟ್ಟಿ ಬೆನ್ನಲ್ಲೇ ಇದೀಗ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ರಾಜಕೀಯ ನಿವೃತ್ತಿ ಘೋಷಿಸಿರುವುದು ಅಚ್ಚರಿಗೆ ಕಾರಣವಾಗಿದೆ.

ಟಿಕೆಟ್ ಘೋಷಣೆಗೂ ಮುನ್ನವೇ ಕೇಸರಿ ಮನೆಯಲ್ಲಿ ಕಂಪನ ಆರಂಭವಾಗಿದೆ. ಈಗಾಗಲೇ ರವೀಂದ್ರನಾಥ್ ಹಾಗೂ ಶಾಸಕ ಹಾಲಾಡಿ ಶ್ರೀನಿವಾಸ್ ಶೆಟ್ಟಿ ಈ ಬಾರಿ ವಿಧಾನಸಭೆಯ ಚುನವಣೆಯಲ್ಲಿ ಸ್ಪರ್ಧಿಸುತ್ತಿಲ್ಲ ಎಂದು ಘೋಷಿಸಿದ್ದರು. ಇದರ ನಡುವೆಯೇ ಇದೀಗ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ಇ-ಮೇಲ್ ಮೂಲಕ ರಾಜಕೀಯ ನಿವೃತ್ತಿ ಪಡೆಯುವುದಾಗಿ ತಿಳಿಸಿದ್ದಾರೆ.


Spread the love

About Laxminews 24x7

Check Also

ಮೈಸೂರಿನಿಂದ ಉದಯಪುರಕ್ಕೆ ತೆರಳುತ್ತಿದ್ದ ರೈಲಿನ ಇಂಜಿನ್​ನಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಟಿಯಾಗಿತ್ತು.

Spread the loveರಾಮನಗರ: ಬೊಂಬೆನಗರಿ ಚನ್ನಪಟ್ಟಣದ ಬಳಿ ಚಲಿಸುತ್ತಿದ್ದ ರೈಲಿನ ಇಂಜಿನ್​​ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಇಂದು (ಗುರುವಾರ) ನಡೆದಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ