Breaking News
Home / ರಾಜಕೀಯ / ಹುಬ್ಬಳ್ಳಿ: ಟಿಕೇಟ್‌ ದೊರೆಯುವ ಭರವಸೆ ಇದೆ, ದೆಹಲಿಗೆ ಹೋಗುತ್ತೇನೆ ಎಂದ ಶೆಟ್ಟರ್‌

ಹುಬ್ಬಳ್ಳಿ: ಟಿಕೇಟ್‌ ದೊರೆಯುವ ಭರವಸೆ ಇದೆ, ದೆಹಲಿಗೆ ಹೋಗುತ್ತೇನೆ ಎಂದ ಶೆಟ್ಟರ್‌

Spread the love

ಹುಬ್ಬಳ್ಳಿ : ನನ್ನ ಹೆಸರು ಮೊದಲ ಪಟ್ಟಿಯಲ್ಲಿ ಬರಬೇಕಿತ್ತು ಬಂದಿಲ್ಲ. ರಾಷ್ಟ್ರೀಯ ಅಧ್ಯಕ್ಷರು ಫೋನ್ ಮಾಡಿದ್ರು. ಹೀಗಾಗಿ ಇಂದು ದೆಹಲಿಗೆ ಹೋಗುತ್ತಿದ್ದೇನೆ . ಹೋಗಿ ಚರ್ಚೆ ಮಾಡುತ್ತೇನೆ ಎಂದು ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು.

 

ನಗರದ ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ಸಂಜೆ ಫೋನ್ ಮಾಡಿ ರಾಷ್ಟ್ರೀಯ ಅಧ್ಯಕ್ಷರು ಬನ್ನಿ ಎಂದಿದ್ದಾರೆ. ಹೀಗಾಗಿ ನಾನು ಹೋಗುತ್ತೇನೆ. ಏನು ಆಗುತ್ತದೆ ಎನ್ನುವುದನ್ನು ಈಗ ಚರ್ಚೆ ಮಾಡೋದು ಬೇಡ. ನಾನು ದೆಹಲಿಗೆ ನಂತರ ನೋಡೋಣ ಎಂದರು.

ನನ್ನ ನಿಲುವು ನಾನು ಹೇಳಿದ್ದೇನೆ, ನನಗೆ ಟಿಕೆಟ್ ಸಿಗುವ ಭರವಸೆ ಇದೆ. ನಾನು ಸ್ಪರ್ಧೆ ಮಾಡೇ ಮಾಡ್ತೀನಿ. ನಾನು ದಿಲ್ಲಿ ಮಟ್ಟದಲ್ಲಿ ಯಾರನ್ನೂ ಸಂಪರ್ಕ ಮಾಡಿರಲಿಲ್ಲ. ಇದೀಗ ಅವರೇ ನನ್ನ ಬನ್ನಿ ಎಂದಿದ್ದಾರೆ. ಇಂದು ಹೋಗುತ್ತೇನೆ ಎಂದು ಮೊದಲ ಪಟ್ಟಿಯಲ್ಲಿ ಹೆಸರು ಬರದೆ ಇರೋದಕ್ಕೆ ಶೆಟ್ಟರ್ ಅಸಮಾಧಾನ ವ್ಯಕ್ತಪಡಿಸಿದರು.


Spread the love

About Laxminews 24x7

Check Also

ಮಾಜಿ ಪ್ರಧಾನಿಗಳ ಮೊಮ್ಮಗ, ಸಂಸದ ದೇಶ ಬಿಟ್ಟು ಪರಾರಿಯಾಗಿರುವುದು ನಾಚಿಕೆಗೇಡು : ಡಿಕೆಶಿ

Spread the loveಬೆಂಗಳೂರು,ಏ.28- ತಲೆ ತಗ್ಗಿಸುವ ಕೆಲಸ ಮಾಡಿ ಮಾಜಿ ಪ್ರಧಾನಿಗಳ ಮೊಮ್ಮಗ ಹಾಗೂ ಸಂಸದ ದೇಶ ಬಿಟ್ಟು ಪರಾರಿಯಾಗಿರುವುದು ನಾಚಿಕೆಗೇಡಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ