Breaking News

ರಾಜಕೀಯ ನಾಯಕರಿಗೂ ಚುನಾವಣಾ ನೀತಿ ಸಂಹಿತೆ ಬಿಸಿ

Spread the love

 ದಕ್ಷಿಣ ಕನ್ನಡ : ಚುನಾವಣಾ ನೀತಿ ಸಂಹಿತೆ ಬಿಸಿ ಜನಸಾಮಾನ್ಯರಿಗೆ ಮಾತ್ರವಲ್ಲ ರಾಜಕೀಯ ನಾಯಕರಿಗೂ ತಟ್ಟಲು ಆರಂಭವಾಗಿದೆ.

 

 

ಸದ್ಯ ಚಾರ್ಮಾಡಿ ಚೆಕ್ ಪೋಸ್ಟ್ ನಲ್ಲಿ ಪೊಲೀಸರು ಹಾಗೂ ಚುನಾವಣಾ ಅಧಿಕಾರಿಗಳು ಕಟ್ಟು ನಿಟ್ಟಿನ ವಾಹನ ತಪಾಸಣೆ ನಡೆಸುತ್ತಿದ್ದು ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಮತ್ತು ಜಿಲ್ಲಾಧ್ಯಕ್ಷ ಸುದರ್ಶನ ಅವರ ಕಾರನ್ನು ತಡೆದು ತಪಾಸಣೆ ನಡೆಸಿದ್ದಾರೆ‌.

ಅಧಿಕಾರಿ ಜಯಕೀರ್ತಿ ಹೆಚ್.ಬಿ. ಅವರಿದ್ದ ತಂಡವು ಚಾರ್ಮಾಡಿ ಚೆಕ್ ಪೋಸ್ಟ್ ನಲ್ಲಿ ತಡೆದು ನಿಲ್ಲಿಸಿ ಕಾರು ಪರಿಶೀಲನೆ ನಡೆಸಿ ನಂತರ ಪ್ರಯಾಣಕ್ಕೆ ಅನುವು ಮಾಡಿಕೊಟ್ಟಿದ್ದಾರೆ.

 

 

ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಜಿಲ್ಲಾಧ್ಯಕ್ಷರಿರುವ ಇನೋವಾ ಕಾರು ಹಾಗೂ ಐದು ಪೊಲೀಸ್ ಭದ್ರತಾ ವಾಹನದೊಂದಿಗೆ ಬೆಂಗಳೂರಿನಿಂದ ಮಂಗಳೂರಿಗೆ ಚಾರ್ಮಾಡಿ ಘಾಟ್ ರಸ್ತೆ ಮೂಲಕ ಬರುತ್ತಿದ್ದ ವೇಳೆ ತಪಾಸಣೆ ನಡೆಸಿದರು.


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ