Breaking News

ಸಿಎಂ ಹುದ್ದೆ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರಿಗೂ ಪರೋಕ್ಷ ವಾರ್ನಿಂಗ್ ಕೊಟ್ಟ ಖರ್ಗೆ

Spread the love

ಕೋಲಾರ: ರಾಜ್ಯದಲ್ಲಿ ಯಾರು ಬೇಕಾದರೂ ಸಿಎಂ ಆಗಲಿ, ಅದು ನನಗೆ ಬೇಡ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಹುದ್ದೆ ರೇಸ್ ನಲ್ಲಿ ನಾನಿಲ್ಲ ಎಂದು ತಿಳಿಸಿದ್ದಾರೆ.

ರಾಜ್ಯ ಕಾಂಗ್ರೆಸ್ ನಲ್ಲಿ ಕೆಲ ದಿನಗಳಿಂದ ಸಿಎಂ ಹುದ್ದೆಗೆ ಯಾರೆಲ್ಲ ಸಮರ್ಥರಿದ್ದಾರೆ ಎಂಬ ಬಗ್ಗೆ ಭಾರಿ ಚರ್ಚೆ ನಡೆಯುತ್ತಿದ್ದು, ಈ ಬಗ್ಗೆ ಕೋಲಾರದಲ್ಲಿ ನಡೆಯುತ್ತಿರುವ ಜೈ ಭಾರತ್ ಸಮಾವೇಶದಲ್ಲಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ ಪರೋಕ್ಷ ವಾರ್ನಿಂಗ್ ಕೊಟ್ಟಿದ್ದಾರೆ.

ಮುಖ್ಯಮಂತ್ರಿ ಯಾರಾಗಬೇಕು ಎಂಬ ಬಗ್ಗೆ ತಲೆಕೆಡಿಸಿಕೊಳ್ಳಬೇಕಿಲ್ಲ, ಮೊದಲು ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕು. ರಾಜ್ಯದಲ್ಲಿ ಯಾರು ಬೇಕಾದರೂ ಸಿಎಂ ಆಗಲಿ, ಅದು ನನಗೆ ಬೇಡ. ಮೊದಲು ಕರ್ನಾಟಕದಲ್ಲಿ ಕಾಂಗ್ರೆಸ್ ಬಹುಮತದಿಂದ ಅಧಿಕಾರಕ್ಕೆ ಬರಬೇಕು ಅಷ್ಟೇ ಎಂದು ಖಡಕ್ ಆಗಿ ತಿಳಿಸಿದರು.

ಮೊದಲು ಪಕ್ಷ ಅಧಿಕಾರಕ್ಕೆ ಬರಲಿ, ನಂತರ ಮುಖ್ಯಮಂತ್ರಿ ಬಗ್ಗೆ ಶಾಸಕರು ನಿರ್ಧಾರ ಮಾಡುತ್ತಾರೆ. ಈಗಲೇ ಆ ಬಗ್ಗೆ ಚರ್ಚೆ ಬೇಡ ಎಂದು ಹೇಳಿದರು. ಈ ಮೂಲಕ ಸಿಎಂ ಕುರ್ಚಿಗಾಗಿ ಪೈಪೋಟಿ ನಡೆಸುತ್ತಿರುವ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರಿಗೂ ಪರೋಕ್ಷವಾಗಿ ಎಚ್ಚರಿಕೆ ನೀಡಿದ್ದಾರೆ.


Spread the love

About Laxminews 24x7

Check Also

ವಿಜಯಪುರದಲ್ಲಿ ಟ್ರ‍್ಯಾಕರ್, ಜಿಪಿಎಸ್ ಹೊಂದಿದ್ದ ರಣಹದ್ದು ಪತ್ತೆ

Spread the love ವಿಜಯಪುರ: ಜಿಲ್ಲೆಯಲ್ಲಿ ಚಡಚಣ (Chadachana) ತಾಲೂಕಿನ ಗೋಟ್ಯಾಳ ಗ್ರಾಮದ ತೋಟದಲ್ಲಿ ಟ್ರ‍್ಯಾಕರ್, ಜಿಪಿಎಸ್ ಹೊಂದಿದ್ದ ರಣಹದ್ದುವೊಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ