Breaking News

ಲಂಚ ಸ್ವೀಕರಿಸುತ್ತಿದ್ದ ಆರೋಗ್ಯಾಧಿಕಾರಿ ಲೋಕಾಯುಕ್ತ ಬಲೆಗೆ

Spread the love

ಬೆಂಗಳೂರು : ಬೆಂಗಳೂರಿನಲ್ಲಿ ಲಂಚ ಸ್ವೀಕರಿಸುತ್ತಿದ್ದ ಬಿಬಿಎಂಪಿ ಆರೋಗ್ಯಾಧಿಕಾರಿ(BBMP Health Officer) ಲೋಕಾಯುಕ್ತ ಬಲೆ( Lokayukta Raid)ಗೆ ಬಿದ್ದಿದ್ದಾರೆ.

ವಿಧಾನ ಸಭೆ ಚುನಾವಣೆ ಹೊಸ್ತಿಲಿನಲ್ಲೇ ಸಿಲಿಕಾನ್‌ ಸಿಟಿ ಬೆಂಗಳೂರಿನ ಸಿ.ವಿ ರಾಮನ್‌ ನಗರದ (ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ) ಬಿಬಿಎಂಪಿ ಆರೋಗ್ಯಾಧಿಕಾರಿ ವಿ.ಶಿವೇಗೌಡ 50 ಸಾವಿರ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಸಿಲುಕಿದ್ದಾರೆ.

 

ಸೊಳ್ಳೆ ನಿಯಂತ್ರಕ್ಕಾಗಿ ಶ್ರೀನಿವಾಸ್‌ ಎಂಬುವರು ಗುತ್ತಿಗೆ ಪಡೆದಿದ್ದರು. ಇದಕ್ಕಾಗಿ ಬಿಬಿಎಂಪಿ ಆರೋಗ್ಯಾಧಿಕಾರಿ 80 ಸಾವಿರ ಲಂಚ ಕೇಳಿದ್ದರು.ಈಗಾಗಲೇ ಮುಂಗಡವಾಗಿ ವಿ.ಶಿವೇಗೌಡ 30 ಸಾವಿರ ಲಂಚವನ್ನು ಪಡೆದುಕೊಂಡಿದ್ದರು. ಇನ್ನುಳಿದ 50 ಸಾವಿರ ರೂಪಾಯಿ ಪಡೆಯುವ ಸಂದರ್ಭದಲ್ಲಿ ಲೋಕಾಯುಕ್ತ ಬಲೆ( Lokayukta Raid)ಗೆ ಬಿದ್ದಿದ್ದಾರೆ ಎಂದು ತಿಳಿಯಲಾಗಿದೆ.

ಶಿಮ್ಲಾ ಆಸ್ಪತ್ರೆಯಲ್ಲಿ ಭಾರೀ ಅಗ್ನಿ ಅವಘಡ , 250 ಜನರ ಸ್ಥಳಾಂತರ

ಶಿಮ್ಲಾ: ಹಿಮಾಚಲ ಪ್ರದೇಶದ ಶಿಮ್ಲಾದ ಇಂದಿರಾ ಗಾಂಧಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಆಸ್ಪತ್ರೆಯ ಅಡುಗೆ ಮನೆಯಲ್ಲಿ ಎರಡು ಗ್ಯಾಸ್ ಸಿಲಿಂಡರ್‌ಗಳು ಸ್ಫೋಟಗೊಂಡ ಪರಿಣಾಮ ಭಾರೀ ಬೆಂಕಿ ಕಾಣಿಸಿಕೊಂಡಿದೆ. ಘಟನೆಯಲ್ಲಿ250 ಜನರನ್ನು ಸ್ಥಳಾಂತರಿಸಲಾಗಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.


Spread the love

About Laxminews 24x7

Check Also

ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ನಿಷೇಧ:

Spread the loveಬೆಂಗಳೂರು: ಆನ್​ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್​ಗೆ ಅಂಕುಶ ಹಾಕಲು ರಾಜ್ಯ ಸರ್ಕಾರ ಹೊಸ ಮಸೂದೆಯನ್ನು ರೂಪಿಸಿದೆ.‌ ಕರ್ನಾಟಕ ಪೊಲೀಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ