Breaking News

ಸಮಾಜದಲ್ಲಿ ಗಲಭೆ ಉಂಟು ಮಾಡುವ ಉದ್ದೇಶದಿಂದ ಬಜರಂಗದಳ ನಿಷೇಧಿಸುವ ಉದ್ದೇಶ: ಸಿಎಂ ಬೊಮ್ಮಾಯಿ

Spread the love

ಹುಬ್ಬಳ್ಳಿ: ಬಜರಂಗದಳ ಇಡೀ ದೇಶದಲ್ಲಿ ಇರುವ ಸಂಘಟನೆಯಾಗಿದ್ದು, ಕಾಂಗ್ರೆಸ್​ಗೆ ದೇಶದಲ್ಲಿ ಅಧಿಕಾರವೇ ಇಲ್ಲ, ಅದನ್ನು ಹೇಗೆ ನಿಷೇಧಿಸಲು ಸಾಧ್ಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಶ್ನೆ ಮಾಡಿದರು.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮಾಜದಲ್ಲಿ ಗಲಭೆ ಉಂಟು ಮಾಡುವ ಉದ್ದೇಶದಿಂದ ಬಜರಂಗದಳ ನಿಷೇಧಿಸುವ ಬಗ್ಗೆ ಕಾಂಗ್ರೆಸ್​​​​​​ನವರು ಮಾತುಗಳನ್ನು ಆಡಿದ್ದಾರೆ ಎಂದು ತಿಳಿಸಿದರು. ಕಾಂಗ್ರೆಸ್’ನ ಪ್ರಣಾಳಿಕೆ ಮೋಸದ ಪ್ರಣಾಳಿಕೆ, ಜನರನ್ನು ಮರಳು ಮಾಡುವ ಪ್ರಣಾಳಿಕೆ. ಜನರು ಇದನ್ನು ದಿಕ್ಕರಿಸಲಿದ್ದಾರೆ. ನಾವು ಈಗಾಗಲೇ ಮಾಡಿದ ಕೆಲಸಗಳನ್ನೇ ತಾವು ಮಾಡುವುದಾಗಿ ಹೇಳಿದ್ದಾರೆ. ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಬರೀ ಸುಳ್ಳು ಹೇಳಿದ್ದಾರೆ ಎಂದು ಹರಿಹಾಯ್ದರು.

ಕಾಂಗ್ರೆಸ್ ಪ್ರಣಾಳಿಕೆ ಮಾಡೋಕ್ಕೆ ಆರು ಲಕ್ಷ ಕೋಟಿ ಅನುದಾನ ಬೇಕಾಗುತ್ತದೆ. ಈಗಾಗಲೇ ಬಿಜೆಪಿ ಜಾರಿಗೆ ತಂದ ಯೋಜನೆಗಳನ್ನು ಪುನಃ ಜಾರಿ ಮಾಡುವುದಾಗಿ ಹೇಳಿದ್ದಾರೆ. ಜಲಜೀವನ್ ಮಿಷನ್ ಮೂಲಕ ಮನೆಮನೆಗೆ ನಲ್ಲಿ ಮುಖಾಂತರ ನೀರು ಕೊಡುವ ಕೆಲಸ ಆರಂಭಿಸಲಾಗಿದೆ ಎಂದರು. ಹೆಣ್ಣು ಮಕ್ಕಳಿಗೆ ಉಚಿತ ಬಸ್​ ಪಾಸ್ ಕೊಡುವ ವಿಚಾರವಾಗಿ ಮಾತನಾಡಿ, ನಾವು ಈಗಾಗಲೇ ಬಜೆಟ್​ನಲ್ಲಿ ಘೋಷಣೆ ಮಾಡಿದ್ದೇವೆ. ಮೀಸಲಾತಿ ಪ್ರಮಾಣವನ್ನು ಶೇ.75 ಕ್ಕೆ ಹೆಚ್ಚಳ ಮಾಡುವುದಾಗಿ ಹೇಳಿದ್ದಾರೆ. ಅದನ್ನು ಹೇಗೆ ಮಾಡತ್ತಾರೆ? ಕೇಂದ್ರದಲ್ಲಿ ಇವರ ಸರ್ಕಾರ ಇದೆ ನಾ? ಎಂದು ಪ್ರಶ್ನೆ ಮಾಡಿದರು. ಹಿಂದುಳಿದ ಜನಾಂಗ ನಿಗಮಗಳನ್ನು ಸ್ಥಾಪಿಸುವುದಾಗಿ ಹೇಳಿದೆ. ನಾನು ಈಗಾಗಲೇ ಘೋಷಣೆ ಮಾಡಿ ಆದೇಶ ಮಾಡಿದ್ದೇನೆ. ಕಾಂಗ್ರೆಸ್ ಅದನ್ನೇ ತನ್ನ ಪ್ರಣಾಳಿಕೆಯಲ್ಲಿ ಹೇಳಿದೆ ಎಂದು ಬಸವರಾಜ ಬೊಮ್ಮಾಯಿ ಹೇಳಿದರು.

ಕಾಂಗ್ರೆಸ್​ ಅಧಿಕಾರಕ್ಕೆ ಬರಲ್ಲ ಬಜರಂಗದಳ ನಿಷೇಧ ಆಗಲ್ಲ (ಗದಗ): ಬಜರಂಗದಳ ನಿಷೇಧಿಸಬೇಕೆಂದರೆ ಕಾಂಗ್ರೆಸ್ ಮೊದಲು ಅಧಿಕಾರಕ್ಕೆ ಬರಬೇಕು. ಕಾಂಗ್ರೆಸ್​ ಅಧಿಕಾರಕ್ಕೆ ಬರಲ್ಲ. ಬಜರಂಗದಳ ನಿಷೇಧ ಆಗುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ವ್ಯಂಗ್ಯವಾಡಿದ್ದಾರೆ. ಬಜರಂಗದಳ ಬ್ಯಾನ್‌ ಮಾಡೋ ಪ್ರಶ್ನೆಯೇ ಇಲ್ಲ ಹಾಗೂ ಕಾಂಗ್ರೆಸ್ ಅಧಿಕಾರಕ್ಕೆ ಬರುವುದೂ ಇಲ್ಲ. ಭಜರಂಗದಳ ಸಾಮಾಜಿಕ, ಧಾರ್ಮಿಕವಾಗಿ ಕೆಲಸ ಮಾಡುವ ಸಂಘ ಅದು. ಪಿಎಫ್​ಐ ದೇಶವಿರೋಧಿ ಕೆಲಸ ಮಾಡಿದೆ. ಭಯೋತ್ಪಾದಕ ‌ಕೆಲಸದಲ್ಲಿ ತೊಡಗಿದೆ. ಅವರ ಮೇಲೆ ಸಾಕಷ್ಟು ಪ್ರಕರಣಗಳು ದಾಖಲಾಗಿರುವ ಪುರಾವೆಗಳೂ ಇವೆ. ಆದ ಕಾರಣ ಪಿಎಫ್​ಐಯನ್ನು ಬಜರಂಗದಳಕ್ಕೆ ಹೊಲಿಸುವುದು ಸರಿಯಲ್ಲ ಎಂದು ಸಿಎಂ ಹೇಳಿದ್ದಾರೆ.

ನಾವು ಮಾಡಿದ್ದನ್ನು ಕಾಂಗ್ರೆಸ್ ತಮ್ಮ‌ ಪ್ರಣಾಳಿಕೆಯಲ್ಲಿ ಪ್ರಕಟಿಸಿದೆ. ನಾವು ನೀರು ಕೊಟ್ಟಿದ್ದೇವೆ ಆದರೇ ಅವರು ಕುಡಿಯುವ ನೀರು ಕೋಡುತ್ತೇವೆ ಅಂತಾ ಹೇಳಿದ್ದಾರೆ. ಹೆಣ್ಣು ಮಕ್ಕಳಿಗೆ ಪಾಸ್ ಕೊಡ್ತೇವೆ ಅಂತಾರೆ. ನಾವು ಆಗಲೇ ಅದನ್ನು ಕೊಟ್ಟಿದ್ದೇವೆ. ನಮ್ಮ ಪ್ರಣಾಳಿಕೆಯನ್ನು ಕಾಂಗ್ರೆಸ್ ಕಟ್ ಆಯಂಡ್ ಪೇಸ್ಟ್ ಮಾಡಿದೆ ಎಂದು ಸಿಎಂ ವ್ಯಂಗ್ಯವಾಡಿದ್ದಾರೆ.


Spread the love

About Laxminews 24x7

Check Also

ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್‌ ಆಹ್ವಾನ ವಿರೋಧಿಸಿ ಮತ್ತೆರಡು ಪಿಐಎಲ್ ಸಲ್ಲಿಕೆ

Spread the loveನಾಡಹಬ್ಬ ಐತಿಹಾಸಿಕ ಮೈಸೂರು ದಸರಾ ಉದ್ಘಾಟನೆಗೆ ಬೂಕರ್‌ ಪ್ರಶಸ್ತಿ ಪುರಸ್ಕೃತ ಲೇಖಕಿ ಬಾನು ಮುಷ್ತಾಕ್‌ರನ್ನು ಮುಖ್ಯ ಅತಿಥಿಯಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ