Breaking News

ನಾಲ್ವರು ವಿದ್ಯಾರ್ಥಿಗಳು ರಾಜ್ಯಕ್ಕೆ ಪ್ರಥಮ

Spread the love

ಬೆಂಗಳೂರು: ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು, ಶೇ.83.89ರಷ್ಟು ಫಲಿತಾಂಶ ಬಂದಿದೆ. ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಸುದ್ದಿಗೋಷ್ಠಿಯಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷಾ ಫಲಿತಾಂಶ ಪ್ರಕಟಿಸಲಾಯಿತು. ನಾಲ್ವರು ವಿದ್ಯಾರ್ಥಿಗಳು 625ಕ್ಕೆ 625 ಅಂಕಗಳನ್ನು ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.

 

ಭೂಮಿಕಾ ಪೈ – ನ್ಯೂ ಮೆಕಾಲೆ ಶಾಲೆ ಹೊಸೂರು ರಸ್ತೆ
ಯಶಸ್ ಗೌಡ – ಬಿಜಿಎಸ್ ಸ್ಕೂಲ್ ಚಿಕ್ಕಬಳ್ಳಾಪುರ
ಅನುಪಮಾ ಶ್ರೀಶೈಲ್ ಹಿರೇಹೊಳಿ – ಶ್ರೀ ಕುಮಾರೇಶ್ವರ ಶಾಲೆ ಸವದತ್ತಿ – ಬೆಳಗಾವಿ
ಭೀಮನಗೌಡ ಪಾಟೀಲ್- ಮುದ್ದೇಬಿಹಾಳ-ವಿಜಯಪುರ

ಫಲಿತಾಂಶಕ್ಕಾಗಿ karresults.nic.in
kseab.karnataka.gov.in ನಲ್ಲಿ ನೋಡಬಹುದು. ಫಲಿತಾಂಶಕ್ಕಾಗಿ ಅಭ್ಯರ್ಥಿಗಳು ನೊಂದಣಿ ಸಂಖ್ಯೆ ನಮೂದಿಸಬೇಕು.


Spread the love

About Laxminews 24x7

Check Also

ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ನಿಷೇಧ:

Spread the loveಬೆಂಗಳೂರು: ಆನ್​ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್​ಗೆ ಅಂಕುಶ ಹಾಕಲು ರಾಜ್ಯ ಸರ್ಕಾರ ಹೊಸ ಮಸೂದೆಯನ್ನು ರೂಪಿಸಿದೆ.‌ ಕರ್ನಾಟಕ ಪೊಲೀಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ