Breaking News
Home / ರಾಜಕೀಯ / ಹಾಡಹಗಲೇ ಅಟ್ಟಾಡಿಸಿ ಬಸ್ ಡ್ರೈವರ್ ಭೀಕರ ಹತ್ಯೆ

ಹಾಡಹಗಲೇ ಅಟ್ಟಾಡಿಸಿ ಬಸ್ ಡ್ರೈವರ್ ಭೀಕರ ಹತ್ಯೆ

Spread the love

ಕಲಬುರಗಿ: ಹಾಡಹಗಲೇ ಬಸ್ ನಿಲ್ದಾಣದಲ್ಲಿ ಚಾಲಕನನ್ನು ಅಟ್ಟಾಡಿಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಹತ್ಯೆಗೈದಿರುವ ಘಟನೆ ಕಲಬುರಗಿ ಸಿಟಿ ಬಸ್ ನಿಲ್ದಾಣದಲ್ಲಿ ನಡೆದಿದೆ.

ಕೆಕೆಆರ್‌ಟಿಸಿ ಬಸ್ ಚಾಲಕ ನಾಗಯ್ಯಸ್ವಾಮಿ (45) ಹತ್ಯೆಗೀಡಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ಮೂಲತಃ ಅಫಜಲಪುರ ತಾಲೂಕಿನ‌ ಮದರಿ ಗ್ರಾಮದ ನಾಗಯ್ಯಸ್ವಾಮಿ, ಸದ್ಯ ಕಲಬುರಗಿಯ ಮಹಾದೇವ ನಗರದಲ್ಲಿ ವಾಸವಿದ್ದರು.

ಕಲಬುರಗಿಯಲ್ಲಿ ಹಾಡಹಗಲೇ ಅಟ್ಟಾಡಿಸಿ ಬಸ್ ಡ್ರೈವರ್ ಭೀಕರ ಹತ್ಯೆ

ಕಳೆದ 20 ವರ್ಷಗಳಿಂದ ಬಸ್ ಚಾಲಕನಾಗಿ‌ ಸೇವೆ ಸಲ್ಲಿಸುತ್ತಿದ್ದ ನಾಗಯ್ಯಸ್ವಾಮಿ ಅವರು ಕಲಬುರಗಿ ಡಿಪೋ ಸಂಖ್ಯೆ 3ರಲ್ಲಿ ಸೂಪರ್ ಮಾರ್ಕೆಟ್​ನಿಂದ ಮಿನಜಗಿ‌ ಬಸ್ ಚಾಲಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇಂದು‌ ಸಹ ಬೆಳಗ್ಗೆಯಿಂದ ಎರಡು ರೌಂಡ್ ಮಿನಜಗಿಗೆ ಹೋಗಿ ಬಂದಿದ್ದರು. ಮಧ್ಯಾಹ್ನ 1-30 ರ ಸುಮಾರಿಗೆ‌ ಮಿನಜಗಿಯಿಂದ ಸೂಪರ್ ಮಾರ್ಕೆಟ್​ ಸಿಟಿ ಬಸ್ ನಿಲ್ದಾಣದಲ್ಲಿ KA-32, F-1652 ಸಾರಿಗೆ ಬಸ್ ಚಲಾಯಿಸಿಕೊಂಡು ಬಂದಿದ್ದಾರೆ.

ಬಸ್ ನಿಲ್ದಾಣದಲ್ಲಿ ಬಸ್‌ನಿಂದ ಕೆಳಗೆ ಇಳಿಯುತ್ತಿದ್ದಂತೆ ಮೂವರು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ಮಾಡಿದ್ದಾರೆ. ದಾಳಿಯಲ್ಲಿ ಕೈ ಹೆಬ್ಬೆರಳು ತುಂಡಾಗ್ತಿದ್ದಂತೆ ಬಸ್ ನಿಲ್ದಾಣ ಒಳಗೆ ಓಡಿದ ನಾಗಯ್ಯಸ್ವಾಮಿಯನ್ನು ಬೆನ್ನಟ್ಟಿ ಮಾರಕಾಸ್ತ್ರಗಳಿಂದ ಕೊಚ್ಚಿ‌ ಹತ್ಯೆಗೈದು ಪರಾರಿಯಾಗಿದ್ದಾರೆ. ಹೋಗುವಾಗ ಕೊಂಚ ದೂರದಲ್ಲಿ ನಿಂತಿದ್ದ ಬಸ್‌ವೊಂದರ ಬಳಿ ಮಾರಕಾಸ್ತ್ರ ಎಸೆದು‌ ಪರಾರಿಯಾಗಿದ್ದಾರೆ


Spread the love

About Laxminews 24x7

Check Also

ನೀಟ್ ಪರೀಕ್ಷಾ ಅಕ್ರಮ ಎಸಗಿದವರನ್ನು ಸುಮ್ಮನೆ ಬಿಡೋದಿಲ್ಲ: ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಭರವಸೆ

Spread the loveನವದೆಹಲಿ, ಜೂನ್ 16: NEET ವಿಷಯದಲ್ಲಿ ಯಾವುದೇ ರೀತಿಯ ಅಕ್ರಮ ಎಸಗುವವರನ್ನು ಬಿಡುವುದಿಲ್ಲ ಎಂದು ಶಿಕ್ಷಣ ಸಚಿವ ಧರ್ಮೇಂದ್ರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ