Breaking News
Home / Uncategorized / ಮಡಿಕೇರಿ: ಆಸ್ತಿ ಆಸೆಗೆ ವಿಕಲಚೇತನ ವ್ಯಕ್ತಿಯನ್ನೇ ಕೊಲೆಗೈದ ಚಿಕ್ಕಪ್ಪ; ಆರೋಪಿಗಳನ್ನು ಬಂಧಿಸಿದ ಪೊಲೀಸರು

ಮಡಿಕೇರಿ: ಆಸ್ತಿ ಆಸೆಗೆ ವಿಕಲಚೇತನ ವ್ಯಕ್ತಿಯನ್ನೇ ಕೊಲೆಗೈದ ಚಿಕ್ಕಪ್ಪ; ಆರೋಪಿಗಳನ್ನು ಬಂಧಿಸಿದ ಪೊಲೀಸರು

Spread the love

ಮಡಿಕೇರಿ: ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಕಳತ್ಮಾಡು ಗ್ರಾಮದಲ್ಲಿ ವಿಕಲಚೇತನ ವ್ಯಕ್ತಿಯನ್ನು ಹತ್ಯೆಗೈದಿದ್ದ ಮೂವರು ಆರೋಪಿಗಳನ್ನು ಸೆರೆ ಹಿಡಿಯಲಾಗಿದೆ. ವಿಕಲಾಂಗ ಚೇತನ ಉದಯ್ ಕುಮಾರ್ (56) ಎಂಬವರು ಕೊಲೆಯಾದ ದುರ್ದೈವಿ ಆಗಿದ್ದಾರೆ. ಆಸ್ತಿಮೇಲಿನ ಆಸೆಗಾಗಿ ಸ್ವಂತ ಚಿಕ್ಕಪ್ಪನಿಂದಲೇ ಈ ಕೊಲೆ ನಡೆದಿದೆ ಎಂಬ ಬಗ್ಗೆ ಕೊಡಗು ಪೊಲೀಸರು ಮಾಹಿತಿ ಕಲೆಹಾಕಿದ್ದಾರೆ. ಹಾಗೂ ಯಶಸ್ವಿಯಾಗಿ ಪ್ರಕರಣವನ್ನು ಬೇಧಿಸಿದ್ದಾರೆ.

ಚಿಕ್ಕಪ್ಪ ಸುಂದರ, ಸುಂದರನ ಪುತ್ರ ಸಂದೀಪ, ಸ್ನೇಹಿತ ಸುಲೈಮಾನ್ ಕೊಲೆ‌ ಆರೋಪಿಗಳಾಗಿದ್ದಾರೆ. 50 ಕ್ಕೂ ಅಧಿಕ ಬಾರಿ‌ ಮರ್ಮಾಂಗಕ್ಕೆ ಗುದ್ದಿ ಕೊಲೆ ಮಾಡಿರುವ ಅಮಾನುಷ ಕೃತ್ಯ ಬೆಳಕಿಗೆ ಬಂದಿದೆ. ಕೊಲೆಗೂ ಮುನ್ನ ಕಂಠಪೂರ್ತಿ ಮಧ್ಯ ಕುಡಿಸಿದ್ದರು. ಮತ್ತಿನಲ್ಲಿದ್ದ ಉದಯ್ ಅವರನ್ನು ನಿರ್ಜನ ಪ್ರದೇಶಕ್ಕೆ ಹೊತ್ತೊಯ್ದು ಕೊಲೆ ಮಾಡಿದ್ದರು. ಕೊಲೆ ಬಳಿಕ ಆರೋಪಿಗಳು ಹೆಣವನ್ನು ಮರಳಿ ಮನೆಗೆ ತಂದಿಟ್ಟಿದ್ದರು. ಮರುದಿನ ಸಹಜ ಸಾವೆಂದು ಬಿಂಬಿಸಿ ಅಂತ್ಯ ಸಂಸ್ಕಾರದ ನಾಟಕ ಮಾಡಿದ್ದರು.

ಮುಕ್ಕಾಲು ಎಕರೆ ಕಾಫಿ ತೋಟ ಹೊಂದಿದ್ದ ಉದಯ್ ಕುಮಾರ್ ಅವಿವಾಹಿತನಾಗಿದ್ದರು. ವಿಕಲಾಂಗ ಚೇತನ ವ್ಯಕ್ತಿ ಆಗಿದ್ದರು. ಉದಯ್ ಕುಮಾರ್ ಆಸ್ತಿ ಮೇಲೆ ಚಿಕ್ಕಪ್ಪನಿಗೆ ಮೊದಲಿನಿಂದಲೂ ಕಣ್ಣು ಇತ್ತು ಎಂದು ತಿಳಿದುಬಂದಿದೆ. ಈ ಬಗ್ಗೆ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿತ್ತು.


Spread the love

About Laxminews 24x7

Check Also

ಅಶ್ಲೀಲ ವಿಡಿಯೋ ಪ್ರಕರಣ: ಮೇ 10ರೊಳಗೆ ವಿಚಾರಣೆಗೆ ಹಾಜರಾಗಲು ಪ್ರಜ್ವಲ್ ರೇವಣ್ಣ ನಿರ್ಧಾರ

Spread the loveಅಶ್ಲೀಲ ವಿಡಿಯೋ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ವಿದೇಶಕ್ಕೆ ತೆರಳಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಮೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ