Breaking News

ಬನದ ಹುಣ್ಣಿಮೆಗೆ ಸವದತ್ತಿ ಯಲ್ಲಮ್ಮನ ದರ್ಶನಕ್ಕೆ ತೆರಳಿದ್ದ ಭಕ್ತರಿಬ್ಬರು ಅಪಘಾತಕ್ಕೆ ಬಲಿಯಾಗಿದ್ದಾರೆ.

Spread the love

ಬೆಳಗಾವಿ..

ಬನದ ಹುಣ್ಣಿಮೆಗೆ ಸವದತ್ತಿ ಯಲ್ಲಮ್ಮನ ದರ್ಶನಕ್ಕೆ ತೆರಳಿದ್ದ ಭಕ್ತರಿಬ್ಬರು ಅಪಘಾತಕ್ಕೆ ಬಲಿಯಾಗಿದ್ದಾರೆ.

ಯಲ್ಲಮ್ಮ ದೇವಿ ಭಕ್ತಾಧಿಗಳ ಮೇಲೆ ರಾಜ್ಯ ಸಾರಿಗೆ ಬಸ್ ಹರಿದು ಇಬ್ಬರು ಮೃತಪಟ್ಟಿದ್ದಾರೆ.

ನಾಲ್ವರು ಗಾಯಗೊಂಡ ಘಟನೆ ನಡೆದಿದೆ.

ಬಸ್ಸಿನ ಬ್ರೇಕ್ ಫೇಲ್ ಆಗಿದ್ದರಿಂದ ನಡೆದುಕೊಂಡು ಹೋಗುತ್ತಿದ್ದ ಇವರ ಮೇಲೆ ಸವದತ್ತಿ ತಾಲೂಕಿನ ಯಲ್ಲಮ್ಮನಗುಡ್ಡ ಜೋಗುಳಭಾವಿ ಬಳಿ ಶುಕ್ರವಾರ ಈ ಘಟನೆ ನಡೆದಿದೆ.

ಬೆಳಗಾವಿ ಶಹಾಪುರ ನಿವಾಸಿ ನಿಕಿತಾ ರಮೇಶ್ ಹದಗಲ್(25), ಚಿಂಚಕಂಡಿ ನಿವಾಸಿ ಬಸಪ್ಪ ವೆಂಕಪ್ಪ ಹಳೇಮನಿ(34) ಮೃತ ಪಟ್ಟವರು.

ಸವದತ್ತಿ ಯಲ್ಲಮ್ಮ ದೇವಿಯ ಜಾತ್ರೆ ಮುಗಿಸಿ ನಡೆದುಕೊಂಡು ಊರಿಗೆ ತೆರಳುತ್ತಿದ್ದ ವೇಳೆ ಯಲ್ಲಮ್ಮ ಗುಡ್ಡದಿಂದ ಧಾರವಾಡ ಕಡೆಗೆ ಹೋಗುತ್ತಿದ ಬಸ್ ಬ್ರೇಕ್ ಫೇಲ್ ಆಗಿ ಚಾಲಕನ ನಿಯಂತ್ರಣ ತಪ್ಪಿ ಭಕ್ತಾಧಿಗಳ ಮೇಲೆ ಹರಿದಿದೆ. ಗಾಯಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.
Advertisement
ಸವದತ್ತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ