Breaking News

ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ ವೇಯಲ್ಲಿ ಚಲಿಸುತ್ತಿದ್ದ ಟಿಪ್ಪರ್‌ನಲ್ಲಿ ಆಕಸ್ಮಿಕ ಬೆಂಕಿ

Spread the love

ಕೋಲಾರ: ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್ ವೇಯಲ್ಲಿ ಚಲಿಸುತ್ತಿದ್ದ ಟಿಪ್ಪರ್‌ನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಪರಿಣಾಮ ಬೆಂಕಿಯ ಕೆನ್ನಾಲಿಗೆಗೆ ಟಿಪ್ಪರ್ ಸುಟ್ಟು ಕರಕಲಾದ ಘಟನೆ ಕೋಲಾರದಲ್ಲಿ ನಡೆದಿದೆ.

ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಡಿ.ಕೆ.ಹಳ್ಳಿ ಪ್ಲಾಂಟೇಶನ್ ಬಳಿ ಈ ಘಟನೆ ನಡೆದಿದ್ದು, ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್ ಕಾರಿಡಾರ್‌ನಲ್ಲಿ ಬೆಂಗಳೂರಿನಿಂದ ವಿ.ಕೋಟಗೆ ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ.

ಇನ್ನೂ ಇಂಜಿನ್‌ನಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಚಾಲಕ ಸಂತೋಷ್ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಟಿಪ್ಪರ್ ನಿಲ್ಲಿಸಿ ಪ್ರಾಣಪಯದಿಂದ ಪಾರಾಗಿದ್ದಾನೆ. ಇನ್ನೂ ನಂಗಲಿ ಮೂಲದ ಸುರೇಶ್ ಎಂಬುವವರಿಗೆ ಸೇರಿದ ಟಿಪ್ಪರ್ ಇದಾಗಿದ್ದು, ಬೆಮೆಲ್ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.‌


Spread the love

About Laxminews 24x7

Check Also

ಸರಣಿ ಪ್ರಶ್ನೆ ಕೇಳಿ ಪ್ರಿಯಾಂಕ್‌ ರಾಜೀನಾಮೆಗೆ ಹೆಚ್‌ಡಿಕೆ ಆಗ್ರಹ

Spread the loveಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್  ಇಲಾಖೆಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ನೇಮಕಾತಿಯಲ್ಲಿ ಭಾರೀ ಅಕ್ರಮ ನಡೆದಿದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ