Home / new delhi / ಭೀಕರವಾಗಿ ಮರಕ್ಕೆ ಗುದ್ದಿದ ಕಾರು; ಐದು ವರ್ಷದ ಮಗು ಸೇರಿ ಮೂರು ಸಾವು

ಭೀಕರವಾಗಿ ಮರಕ್ಕೆ ಗುದ್ದಿದ ಕಾರು; ಐದು ವರ್ಷದ ಮಗು ಸೇರಿ ಮೂರು ಸಾವು

Spread the love

ಚಿತ್ರದುರ್ಗ: ಜಿಲ್ಲೆಯ ಹೊಸದುರ್ಗ ತಾಲೂಕಿನ ಜೋಡಿ ಶ್ರೀರಂಗಾಪುರದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಐದು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ.

ಕುಂದಾಪುರ ಮೂಲದ ಧೃತಿ (5), ಗೀತಾ(32), ಶಾರದಾ (60) ಮೃತ ದುರ್ದೈವಿಗಳು. ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಶಿವಮೊಗ್ಗದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಜೋಡಿ ಶ್ರೀರಂಗಾಪುರ ಬಳಿ ರಸ್ತೆ ಬದಿಯಲ್ಲಿ ಮರಕ್ಕೆ ಕಾರು ಡಿಕ್ಕಿಯಾಗಿ ದುರ್ಘಟನೆ ನಡೆದಿದೆ.

ಕಾರಿನಲ್ಲಿದ್ದವರು ಕುಂದಾಪುರದಿಂದ ಬೆಂಗಳೂರಿಗೆ ತೆರಳುತ್ತಿದ್ದರು. ಹೊಸದುರ್ಗ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.


Spread the love

About Laxminews 24x7

Check Also

ಯುವ ಮತದಾರರ ಚುನಾವಣೆ ಉತ್ಸಾಹ

Spread the loveಯುವ ಮತದಾರರ ಚುನಾವಣೆ ಉತ್ಸಾಹ ಉಡುಪಿ: ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಯುವ ಮತದಾರರ ಪಾತ್ರವೂ ಮಹತ್ವದ್ದಾಗಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ