Breaking News

ಬಸ್- ಕ್ರೂಸರ್ ನಡುವೆ ಭೀಕರ ಅಪಘಾತ: ಸ್ಥಳದಲ್ಲೇ ಐವರು ಸಾವು !

Spread the love

ಮೊಳಕಾಲ್ಮುರು: ಬಸ್ ಹಾಗೂ ಕ್ರೂಸರ್ ಮಧ್ಯೆ ಮೊಳಕಾಲ್ಮುರು ತಾಲ್ಲೂಕಿನ ಬಿಜಿ ಕೆರೆ ಬಳಿ ಭಾನುವಾರ ಬೆಳಿಗ್ಗೆ ಭೀಕರ ಅಪಘಾತ ಸಂಭವಿಸಿದ್ದು, ಐದು ಜನರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ತಿಮ್ಮಣ್ಣ(40) ಪತ್ನಿ ರತ್ನಮ್ಮ(38) ಸೋಮನಮರಡಿ ಗ್ರಾಮದ ದುರುಗಪ್ಪ(16), ಗಜಲಿ ಗ್ರಾಮದ ಮಹೇಶ (19) ಹಾಗು 55 ವರ್ಷದ ಓರ್ವ ವ್ಯಕ್ತಿ ಎಂದು ತಿಳಿದು ಬಂದಿದೆ.

ಮೃತರು ರಾಯಚೂರು ಜಿಲ್ಲೆ ದೆವದುರ್ಗ ತಾಲೂಕಿನ ಹುಣಸೂರು ಗ್ರಾಮದವರಾಗಿದ್ದಾರೆ ಎನ್ನಲಾಗುತ್ತಿದೆ. ಗಾಯಾಳುಗಳನ್ನು ಬಳ್ಳಾರಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.

ಬಸ್ ಬೆಂಗಳೂರಿನಿಂದ ಲಿಂಗಸುಗೂರಿಗೆ ಹೋಗುತಿತ್ತು. ಕ್ರೂಸರ್ ನಲ್ಲಿದ್ದ ಕಾರ್ಮಿಕರು ಚುನಾವಣೆಗೆ ಮತದಾನ ಮಾಡಲು ಗ್ರಾಮಗಳಿಗೆ ಬಂದಿದ್ದರು ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.


Spread the love

About Laxminews 24x7

Check Also

ದಾವಣಗೆರೆ, ಬಾಗಲಕೋಟೆ ವಿಧಾನಸಭೆ ಬೈಎಲೆಕ್ಷನ್: ಉಸ್ತುವಾರಿ ಸಮಿತಿ ರಚನೆ; 31 ಜನರಿಗೆ ಜವಾಬ್ದಾರಿ

Spread the loveಬೆಂಗಳೂರು: ದಾವಣಗೆರೆ ಮತ್ತು ಬಾಗಲಕೋಟೆ ವಿಧಾನಸಭೆ ಉಪ ಚುನಾವಣೆ  ಹಿನ್ನೆಲೆ  ಎರಡೂ ಕ್ಷೇತ್ರಕ್ಕೆ ಕಾಂಗ್ರೆಸ್ ಉಸ್ತುವಾರಿ ವೀಕ್ಷಕರ ನೇಮಿಸಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ