Breaking News
Home / Uncategorized / ಹುಬ್ಬಳ್ಳಿಗೆ ಬರುತ್ತಿದ್ದ ಇಬ್ಬರು ಕ್ರೀಡಾಪಟುಗಳ ದುರ್ಮರಣ: ಮೂವರಿಗೆ ಗಂಭೀರ ಗಾಯ

ಹುಬ್ಬಳ್ಳಿಗೆ ಬರುತ್ತಿದ್ದ ಇಬ್ಬರು ಕ್ರೀಡಾಪಟುಗಳ ದುರ್ಮರಣ: ಮೂವರಿಗೆ ಗಂಭೀರ ಗಾಯ

Spread the love

ವಿಜಯಪುರ: ಲಾರಿ ಹಾಗೂ ಥವೇರಾ ವಾಹನದ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಕ್ರೀಡಾಪಟುಗಳು ಸಾವನ್ನಪ್ಪಿ, ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲೂಕಿನ ರೋಣಿಗಾರ ಕ್ರಾಸ್ ಬಳಿ ಸಂಭವಿಸಿದೆ.

ಮಹಾರಾಷ್ಟ್ರದ ಸೊಲ್ಲಾಪುರದಿಂದ ಹುಬ್ಬಳ್ಳಿಯ ಕಬ್ಬಡ್ಡಿ ಟೂರ್ನಿಯಲ್ಲಿ ಭಾಗವಹಿಸಲು ಬರುತ್ತಿದ್ದ ಸಮಯದಲ್ಲಿ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ ಸೋಹೈಲ್ ಮತ್ತು ಮಹಾದೇವ ಎಂಬ 20 ವರ್ಷದ ಕ್ರೀಡಾಪಟುಗಳು ಸಾವಿಗೀಡಾಗಿದ್ದಾರೆ. ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಅವರ ಬಗ್ಗೆ ಮಾಹಿತಿ ತಿಳಿದು ಬರಬೇಕಿದೆ.
ಥವೇರಾ ವಾಹನಕ್ಕೆ ಮುಖಾಮುಖಿಯಾಗಿ ಲಾರಿ ಡಿಕ್ಕಿ ಹೊಡೆದ ಪರಿಣಾಮ, ವಾಹನ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಮುಂದೆ ಕುಳಿತಿದ್ದ ಇಬ್ಬರು ಕ್ರೀಡಾಪಟುಗಳು ಪ್ರಾಣವನ್ನ ಕಳೆದುಕೊಂಡಿದ್ದಾರೆ.
ಘಟನೆಗೆ ಸಂಬಂಧಿಸಿದ ಹಾಗೇ ಪ್ರಕರಣ ದಾಖಲು ಮಾಡಿಕೊಂಡಿರುವ ಕೊಲ್ಹಾರ ಠಾಣೆಯ ಪೊಲೀಸರು ಮುಂದಿನ ಕಾನೂನು ಕ್ರಮವನ್ನ ಜರುಗಿಸಿದ್ದಾರೆ.


Spread the love

About Laxminews 24x7

Check Also

ಸರ್ಕಾರಿ ವಾಹನದಲ್ಲಿ ಬಿಜೆಪಿ ಹಣ ಸಾಗಣೆ: ದಿನೇಶ್‌ ಗುಂಡೂರಾವ್

Spread the loveಮೈಸೂರು: ‘ಬಿಜೆಪಿ ನಾಯಕರು ಸರ್ಕಾರಿ ವಾಹನಗಳಲ್ಲಿ ಕೋಟ್ಯಂತರ ರೂಪಾಯಿ ಸಾಗಿಸಿ ಹಂಚುತ್ತಿದ್ದಾರೆ. ಐಟಿ, ಇಡಿ ರಕ್ಷಣೆಯಲ್ಲೇ ಈ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ