Breaking News
Home / Uncategorized / ಬಟ್ಟೆ ತೊಳೆಯಲು ಹೋಗಿದ್ದ ಇಬ್ಬರು ಮಹಿಳೆಯರ ಸಾವು: ಮೀನುಗಾರರ ಸಮಯಪ್ರಜ್ಞೆಯಿಂದ ಬದುಕಿದ ಐವರು!

ಬಟ್ಟೆ ತೊಳೆಯಲು ಹೋಗಿದ್ದ ಇಬ್ಬರು ಮಹಿಳೆಯರ ಸಾವು: ಮೀನುಗಾರರ ಸಮಯಪ್ರಜ್ಞೆಯಿಂದ ಬದುಕಿದ ಐವರು!

Spread the love

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆ ಗುಳೇದಗುಡ್ಡದ ಗಂಜಿಕೆರೆಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ಇಬ್ಬರು ಮಹಿಳೆಯರು ಸಾವನ್ನಪ್ಪಿದ್ದಾರೆ. ಲಲಿತಾ ಕತ್ತಿ(37) ಮತ್ತು ಅನುಪಮಾ ದೊಡ್ಡಮನಿ(20) ಜಲಸಮಾಧಿಯಾದವರು. ಕೆರೆಯಲ್ಲಿ ಬಿದ್ದ ಮಹಿಳೆಯನ್ನು ರಕ್ಷಿಸಲು ಹೋಗಿದ್ದ ಆರು ಜನ‌‌ರನ್ನು ಸ್ಥಳೀಯರು ಮತ್ತು ಮೀನುಗಾರರಿಂದ ಐವರ ರಕ್ಷಣೆಯಾಗಿದೆ. ಒಂದೇ ಕುಟುಂಬದ ವ್ಯಕ್ತಿ, ನಾಲ್ವರು ಮಹಿಳೆಯರನ್ನು ರಕ್ಷಣೆ ಮಾಡಲಾಗಿದೆ. ಗುಳೇದಗುಡ್ಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಗುಳೇದಗುಡ್ಡ ಪಟ್ಟಣದ ಗಂಜಿಕೆರೆಯಲ್ಲಿ ಬಟ್ಟೆ ತೊಳೆಯಲು ಹೋದ ಲಲಿತಾ ಕತ್ತಿ ಮತ್ತು ಅನುಪಮಾ ದೊಡ್ಡಮನಿ ಅವರನ್ನು ರಕ್ಷಿಸಲು ಆರು ಜನ‌‌. ಕೆರೆಗೆ ಧುಮಿಕಿದ್ದರು. ಕೆರೆಯಲ್ಲಿ ಅವರೂ ಪರಡತೊಡಗಿದಾಗ ಐವರನ್ನು ರಕ್ಷಿಸಲಾಗಿದೆ. ಸ್ಥಳೀಯರು ಹಾಗೂ ಮೀನುಗಾರಿಂದ ಈ ಐವರ ರಕ್ಷಣೆಯಾಗಿದೆ. ಎಲ್ಲರೂ ಗುಳೇದಗುಡ್ಡ ಪಟ್ಟಣದ ನಿವಾಸಿಗಳು.‌‌ ಸ್ಥಳೀಯರು ಮತ್ತು ಮೀನುಗಾರರು ಸಯಪ್ರಜ್ಞೆಯಿಂದ ನೀರಿಗೆ ಬಿದ್ದವರ ಬಾಯಿಂದ ಬಾಯಿಗೆ ಬಾಯಿಂದ ಉಸಿರು ನೀಡಿ ಬದುಕಿಸಲು ಹರಸಾಹಸ ಪಟ್ಟಿದ್ದಾರೆ. ಅದರಿಂದ ಇಬ್ಬರು ಮಹಿಳೆಯರು ಬದುಕುಳಿದಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ: ಪುತ್ರನ ಪರ ಪ್ರಚಾರಕ್ಕೆ ಆಶಾ ಕಾರ್ಯಕರ್ತೆಯರಿಗೆ ಒತ್ತಡ – ಸಚಿವೆ ಹೆಬ್ಬಾಳ್ಕರ್ ವಿರುದ್ಧ ಕ್ರಿಮಿನಲ್ ಕೇಸ್

Spread the loveಬೆಳಗಾವಿ: ಲೋಕಸಭೆ ಚುನಾವಣೆಯಲ್ಲಿ ನೀತಿ ಸಂಹಿತೆ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ