Breaking News

ಸಾಲದ ಹಣ ಕೇಳಲು ಹೋದ ವ್ಯಕ್ತಿ ಮೇಲೆ ಹಲ್ಲೆ ಆರೋಪ – ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ವಿರುದ್ಧ FIR

Spread the love

ಮೈಸೂರು: ಸಾಲದ ಹಣ ಕೇಳಲು ಹೋದ ವ್ಯಕ್ತಿ ಮೇಲೆ ಹಲ್ಲೆ ಆರೋಪದಲ್ಲಿ ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್  ವಿರುದ್ಧ ಎಫ್ಐಆರ್ ದಾಖಲಾಗಿದೆ. 55 ಲಕ್ಷ ಹಿಂದಿರುಗಿಸದ ಆರೋಪ ವಿಶ್ವನಾಥ್‌ ಮೇಲಿದೆ. ಸಾಲದ ಹಣ ವಾಪಸ್ ಕೇಳಲು ಹೋದ ವ್ಯಕ್ತಿ ಮೇಲೆ ವಿಧಾನ ಪರಿಷತ್ ಸದಸ್ಯ ಅಡಗೂರು ವಿಶ್ವನಾಥ್ ಹಲ್ಲೆ ನಡೆಸಿದ್ದಾರೆ ಎಂದು ದೇವರಾಜ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಮೈಸೂರಿನ ಜಲದರ್ಶಿನಿ ಅತಿಥಿ ಗೃಹದಲ್ಲಿ ವಿಶ್ವನಾಥ್ ಇರುವಾಗ ಹಣ ಕೇಳಲು ಹೋದ ವೇಳೆ ಈ ಘಟನೆ ನಡೆದಿದೆ. ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದರೆಂದು ಕಾಂಗ್ರೆಸ್ ಮುಖಂಡ ಕೋಟೆಹುಂಡಿ ಮಹದೇವು ಆರೋಪಿಸಿ ದೂರು ನೀಡಿದ್ದಾರೆ.

ನ್ಯಾಯಾಲಯದ ಆದೇಶದಂತೆ ಪ್ರಕರಣ ದಾಖಲಾಗಿದೆ. 2013ರಲ್ಲಿ ವಿಶ್ವನಾಥ್ ಎಂಪಿ ಆಗಿದ್ದಾಗ ಕೋಟೆಹುಂಡಿ ಮಹದೇವು, MTB ನಾಗರಾಜ್ ಮುಖಾಂತರ ವಿಶ್ವನಾಥ್ ಹಾಗೂ ಮಗ ಅಮಿತ್ ದೇವರಹಟ್ಟಿ ಅವರಿಗೆ 55 ಲಕ್ಷ ನೀಡಿದ್ದಾರೆ. ಹಣ ಹಿಂದಿರುಗಿಸುವುದಾಗಿ ಸಾಲ ಪಡೆದ ವಿಶ್ವನಾಥ್ ಸತಾಯಿಸಿದ್ದಾರೆ. ಈ ಬಗ್ಗೆ 2026ರ ಫೆಬ್ರವರಿಯಲ್ಲಿ ವಿಶ್ವನಾಥ್ ಅವರು ಜಲದರ್ಶಿನಿಯಲ್ಲಿ ಇರುವಾಗ ಕೋಟೆಹುಂಡಿ ಮಹದೇವು ಹಣ ಕೇಳಲು ಹೋದಾಗ ಅವಾಚ್ಯ ಪದಗಳಿಂದ ನಿಂದಿಸಿ ಕೈಯಲ್ಲಿ ತಲೆಗೆ ಹೊಡೆದಿದ್ದಾರೆ.

ಈ ಬಗ್ಗೆ ಕೋಟೆಹುಂಡಿ ಮಹದೇವು ಅವರು ದೇವರಾಜ ಪೊಲೀಸ್ ಠಾಣೆಯಲ್ಲಿ ಎನ್‌ಸಿಆರ್ ದಾಖಲಿಸಿದ್ದರು. ನಂತರ ಘನ ನ್ಯಾಯಾಲಯದ ಮೊರೆಹೋಗಿ ಪ್ರಕರಣ ದಾಖಲಿಸುವಂತೆ ಆದೇಶ ತಂದಿದ್ದಾರೆ.


Spread the love

About Laxminews 24x7

Check Also

ಡ್ಯೂಪ್ಲಿಕೇಟ್ ಕೀ ಬಳಸಿ ಐಷಾರಾಮಿ ಕಾರುಗಳ ಕಳ್ಳತನ – ಕರ್ನಾಟಕದಿಂದ ರಾಜಸ್ಥಾನವರೆಗೆ ‘ಕಾರ್‌ ಕಳ್ಳರ’ ಜಾಲ; ಇಬ್ಬರು ಅರೆಸ್ಟ್‌

Spread the loveಬೆಂಗಳೂರು: ಡ್ಯೂಪ್ಲಿಕೇಟ್ ಕೀ ಹಾಗೂ ಅತ್ಯಾಧುನಿಕ ಉಪಕರಣಗಳನ್ನ ಬಳಸಿ ದೇಶದ ವಿವಿಧೆಡೆ ಐಷಾರಾಮಿ ಕಾರುಗಳನ್ನು ಕಳ್ಳತನ ಮಾಡಿ, ರಾಜಸ್ಥಾನದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ