Breaking News

ದೆಹಲಿ ವಿದ್ಯಾರ್ಥಿಗಳ ಪರ ನಿಂತ ಆಲಿಯಾ ಭಟ್

Spread the love

ನೀಟ್ ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ಖಂಡಿಸಿ ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ ಮುಂದುವರಿದಿದೆ. ಈ ಪ್ರತಿಭಟನೆಗೆ ಇದೀಗ ಬಾಲಿವುಡ್ ನಟಿ ಆಲಿಯಾ ಭಟ್  ಬೆಂಬಲ ಸೂಚಿಸಿದ್ದು, ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.

ಆಲಿಯಾ ಪೋಸ್ಟ್‌ನಲ್ಲಿ ಏನಿದೆ?

ʼಕಳೆದ ಕೆಲವು ದಿನಗಳಿಂದ ನಡೆಯುತ್ತಿರುವ ಬೆಳವಣಿಗೆಗಳನ್ನು ನೋಡಿದರೆ ತುಂಬಾ ಬೇಸರವಾಗುತ್ತಿದೆ. ಆದರೆ ಈ ಪರಿಸ್ಥಿತಿ ವಿದ್ಯಾರ್ಥಿಗಳಲ್ಲಿ ಧೈರ್ಯ ಮತ್ತೆ ಭರವಸೆಯನ್ನೂ ಮೂಡಿಸಿದೆ. ಪ್ರತಿಯೊಬ್ಬ ವಿದ್ಯಾರ್ಥಿಯ ಹಿಂದೆ ಒಂದು ಕನಸು, ಕುಟುಂಬದ ನಿರೀಕ್ಷೆ ಮತ್ತು ಹಲವು ವರ್ಷಗಳ ಶ್ರಮ ಇರುತ್ತದೆ. ಅವರು ತಮ್ಮ ಭವಿಷ್ಯಕ್ಕಾಗಿ ಮಾತ್ರವಲ್ಲ, ತಮ್ಮ ನಂತರ ಬರುವ ವಿದ್ಯಾರ್ಥಿಗಳಿಗೂ ಉತ್ತಮ ಭವಿಷ್ಯ ಸಿಗಲೆಂದು ಹೋರಾಟ ಮಾಡುತ್ತಿದ್ದಾರೆ.

ವಿದ್ಯಾರ್ಥಿಗಳ ಧೈರ್ಯ ನನಗೆ ಪ್ರೇರಣೆ ನೀಡಿದೆ. ದೇಶದ ಭವಿಷ್ಯ ರೂಪಿಸುವ ಯುವಕರ ಮಾತನ್ನು ನಾವು ನಿಜವಾಗಿಯೂ ಕೇಳುತ್ತಿದ್ದೇವೆಯೇ ಎಂಬ ಪ್ರಶ್ನೆಯನ್ನು ಎಲ್ಲರೂ ಕೇಳಿಕೊಳ್ಳಬೇಕು. ಭವಿಷ್ಯ ಅವರದ್ದು. ಜೈ ಹಿಂದ್ʼ ಎಂದು ಆಲಿಯಾ ಭಟ್ ತಮ್ಮ ಪೋಸ್ಟ್‌ನಲ್ಲಿ ಹೇಳಿದ್ದಾರೆ.

 

ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳು ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ತನಿಖೆ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಹಾಗೂ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸುತ್ತಿದ್ದಾರೆ.


Spread the love

About Laxminews 24x7

Check Also

ಬಿಜೆಪಿ ಶಾಸಕರ ಮೇಲೆ ಮೊಟ್ಟೆ ಎಸೆತ – ಆರೋಪಿ ಪುಣ್ಯೇಶ್ ಬಂಧನ

Spread the loveಬೆಂಗಳೂರು: ಬಿಜೆಪಿ ನಾಯಕರ ಮೇಲೆ ಮೊಟ್ಟೆ ಎಸೆದ  ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಾಜಿನಗರ ಪೊಲೀಸರು  ಪ್ರಮುಖ ಆರೋಪಿ ಪುಣ್ಯೇಶ್‌ನನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ