Breaking News

KPSC ನೇಮಕಾತಿಗೆ ಸುಳ್ಳು ಪ್ರಮಾಣಪತ್ರ ಸಲ್ಲಿಕೆ ಆರೋಪ – ಕೇಸ್‌ ರದ್ದು ಕೋರಿ ಅರ್ಜಿ ಸಲ್ಲಿಸಿದ್ದ ಸುಮಾ ಸಾಹುಕಾರ್‌ಗೆ ಹೈಕೋರ್ಟ್ ತರಾಟೆ

Spread the love

ಬೆಂಗಳೂರು: KPSC ನೇಮಕಾತಿಗೆ ಸುಳ್ಳು ಪ್ರಮಾಣಪತ್ರ ಸಲ್ಲಿಕೆ ಆರೋಪ ಪ್ರಕರಣವನ್ನು ರದ್ದುಗೊಳಿಸುವಂತೆ ಅರ್ಜಿ ಸಲ್ಲಿಸಿದ್ದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಪುತ್ರಿ ಸುಮಾ ಸಾಹುಕಾರ್‌ಗೆ ಹೈಕೋರ್ಟ್‌ ತರಾಟೆಗೆ ತೆಗೆದುಕೊಂಡಿದೆ.

ಇಂದು (ಜು.27) ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ನಾಗಪ್ರಸನ್ನ ಪೀಠ, ಅರ್ಜಿದಾರರನ್ನು ತರಾಟೆಗೆ ತೆಗೆದುಕೊಂಡಿದೆ. ವರ್ಷಕ್ಕೆ 30 ಲಕ್ಷ ರೂ. ಆದಾಯವಿರುವ ನೀವು 40 ಸಾವಿರ ರೂ. ಆದಾಯವೆಂದು ಅರ್ಜಿ ಸಲ್ಲಿಸಿದ್ದೀರಿ. ಇದು ಮೇಲ್ನೋಟಕ್ಕೇ ವಂಚನೆ ಎಂಬುದು ತಿಳಿಯುತ್ತಿದೆ. ಕೆಪಿಎಸ್‌ಸಿಯ ಪ್ರತಿ ನೇಮಕವೂ ವಿವಾದಗಳಿಂದ ಕೂಡಿದೆ. ಬಡವನಿಗೆ ಸಿಗಬೇಕಾದ ಆಯ್ಕೆಯನ್ನು ನೀವು ಕಿತ್ತುಕೊಂಡಿದ್ದೀರಿ ಎಂದು ತರಾಟೆಗೆ ತೆಗೆದುಕೊಂಡಿತು.

ಇದೇ ವೇಳೆ ಸುಮಾ ಪರವಾಗಿ ಹಿರಿಯ ವಕೀಲ ಎಂ.ಅರುಣ್ ಶ್ಯಾಮ್ ವಾದ ಮಂಡಿಸಿದರು. ಬಳಿಕ ಕೋರ್ಟ್ ನಾವು ಪರೀಕ್ಷೆಯಲ್ಲಿ ಭಾಗವಹಿಸದಂತೆ ಯಾರನ್ನು ತಡೆದಿಲ್ಲ. ಆರೋಪಪಟ್ಟಿ ಸಲ್ಲಿಕೆ ಆದ ನಂತರ ಅರ್ಜಿ ಸಲ್ಲಿಸಿ ಅಂತ ಸೂಚಿಸಿದೆ. ಅರ್ಜಿದಾರರ ವಕೀಲರ ಮನವಿಯ ಮೇರೆಗೆ ಪ್ರಕರಣ ರದ್ದು ಕೋರಿದ್ದ ಅರ್ಜಿ ವಾಪಸ್ ಪಡೆಯಲಾಗಿದೆ.


Spread the love

About Laxminews 24x7

Check Also

5 ಲಕ್ಷ ಜನರಿಗೆ ಉದ್ಯೋಗ, 1.5 ಕೋಟಿ ಮಾನವ ದಿನ ಸೃಷ್ಟಿಗೆ ಅವಕಾಶ: ಈಶ್ವರ್‌ ಖಂಡ್ರೆ

Spread the loveಬೆಂಗಳೂರು: ಜುಲೈ 1ರಿಂದ ಜಾರಿಗೆ ತರಲಾಗಿರುವ ಮನ್ರೇಗಾದ  ಬದಲಾದ ರೂಪ ವಿಬಿಜಿ ರಾಮ್ ಜಿ ಅಡಿಯಲ್ಲಿ  ಪ್ರತಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ