Breaking News
Home / ಜಿಲ್ಲೆ / ಬೆಳಗಾವಿ / ಚಿಕ್ಕೋಡಿ / ಚಿಕ್ಕೋಡಿ:ಅಂಬುಲೆನ್ಸ್‌ನಲ್ಲಿ ಪ್ರಯಾಣ ಬೆಳೆಸಿದ್ದ ನಕಲಿ ರೋಗಿಗಳ ಬಂಧನ

ಚಿಕ್ಕೋಡಿ:ಅಂಬುಲೆನ್ಸ್‌ನಲ್ಲಿ ಪ್ರಯಾಣ ಬೆಳೆಸಿದ್ದ ನಕಲಿ ರೋಗಿಗಳ ಬಂಧನ

Spread the love

ಚಿಕ್ಕೋಡಿ: ಭಾರತ ಸಂಪೂರ್ಣ ಲಾಕ್ ಡೌನ್ ಹಿನ್ನೆಲೆಯಲ್ಲಿ ಕರ್ನಾಟಕ ಮಹಾರಾಷ್ಟ್ರ ಸಂಚಾರ ಸಂಪೂರ್ಣ ಸ್ಥಗಿತವಾಗಿದೆ. ಸಂಚಾರ ಸ್ಥಗಿತ ಹಿನ್ನೆಲೆಯನ್ನೆ ಮಾಸ್ಟರ್ ಪ್ಲಾನ್ ಮಾಡಿ ರೋಗಿಗಳ ಸೋಗಿನಲ್ಲಿ ಅಂಬುಲೆನ್ಸ್ ಏರಿದವರು ಈಗ ಪೊಲೀಸರ ಅತಿಥಿಯಾಗಿದ್ದಾರೆ.

ಈ ಘಟನೆ ಮಹರಾಷ್ಟ್ರದ ಕೊಲ್ಹಾಪುರ ನಗರದ ಹೊರವಲಯದಲ್ಲಿ ನಡೆದಿದೆ. ಖಾಸಗಿ ಅಂಬುಲೆನ್ಸ್ ಚಾಲಕನಿಗೆ ಹಣದ ಆಮಿಷ ತೋರಿಸಿ ಕರ್ನಾಟಕದತ್ತ ಬರುತ್ತಿದ್ದ 8 ಜನ ಯುವಕರನ್ನ ಕೊಲ್ಹಾಪುರ ಪೊಲೀಸರು ಬಂಧಿಸಿದ್ದಾರೆ.

ಕೊಲ್ಲಾಪುರ ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ 4 ಕರ ಕೀಣೆ ಟೋಲ್ ನಾಕಾ ಬಳಿ ಅಂಬುಲೆನ್ಸ್ ಪರಿಶೀಲಿಸಿದಾಗ ರೋಗಿಯ ಬದಲು ಯುವಕರು ಇರುವುದು ಪತ್ತೆಯಾಗಿದೆ. ಅಲ್ಲದೆ ಬ್ಯಾಂಡೇಜ್ ಸುತ್ತಿಕೊಂಡು ನಕಲಿ ರೋಗಿಗಳಾಗಿ ಈ ಯುವಕರು ಪುಣೆಯಿಂದ ಬೆಂಗಳೂರು ಕಡೆ ಪ್ರಯಾಣ ಬೆಳೆಸಿದ್ದರು.

ಈ ಕುರಿತು ಕೊಲ್ಹಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಬಹುಭಾಷಾ ನಟ ಪ್ರಕಾಶ್ ರೈ ಮತ ಚಲಾಯಿಸಿದ್ದು ಯಾರಿಗೆ ಗೊತ್ತಾ?

Spread the love ಲೋಕಸಭೆ ಚುನಾವಣೆ 2024 ರ ಎರಡನೇ ಹಂತದಲ್ಲಿ ಇಂದು ಶುಕ್ರವಾರ (ಏಪ್ರಿಲ್ 26) ಆರಂಭವಾಗಿದೆ. 13 …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ