ಬೆಂಗಳೂರು: ಯಾರೂ ಹಿಡಿಯುವುದಿಲ್ಲ, ಪರಿಶೀಲನೆ ನಡೆಸುವುದಿಲ್ಲ ಎಂದು ಕಳ್ಳತನ ಮಾಡಿದ್ದ ಗುಜರಿ ವಸ್ತುಗಳನ್ನು ಅಂಬುಲೆನ್ಸ್ ನಲ್ಲಿ ಸಾಗಾಟ ಮಾಡುತ್ತಿದ್ದರು.
ಶಿವಾಜಿ ನಗರದ ರೆಸಲ್ ಮಾರ್ಕೆಟ್ನಲ್ಲಿ ಸತೀಶ್, ಮಹೇಶ್ ಗುಜರಿ ಸಾಮಾನುಗಳನ್ನು ಹರ್ಷಿಣಿ ಹೆಸರಿನ ಅಂಬುಲೆನ್ಸ್ ಮೂಲಕ ಸಾಗಾಟ ಮಾಡುತ್ತಿದ್ದರು. ವಾಹನಗಳ ಟೈರ್, ಟ್ಯೂಬ್ ಸೇರಿದಂತೆ ಹಲವು ಗುಜರಿ ವಸ್ತುಗಳನ್ನು ಖದೀಮರು ಅಂಬುಲೆನ್ಸ್ ನಲ್ಲಿ ಸಾಗಿಸುತ್ತಿದ್ದರು. ಅನುಮಾನ ಬಂದು ಪೊಲೀಸರು ಅಂಬುಲೆನ್ಸ್ ತಡೆದು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಗುಜರಿ ಸಾಮಾನು ಸಾಗಿಸುತ್ತಿದ್ದ ರಹಸ್ಯ ಬಯಲಾಗಿದೆ.
ಆರೋಪಿಗಳನ್ನು ಶಿವಾಜಿ ನಗರ ಪೊಲೀಸ್ ಠಾಣೆಯಲ್ಲಿ ವಿಚಾರಣೆ ನಡೆಸಲಾಗುತ್ತಿದೆ