Breaking News
Home / ಜಿಲ್ಲೆ / ಕೋಲಾರ / ಆಂಧ್ರ ಗಡಿಯಲ್ಲಿ ಪರದಾಡುತ್ತಿದ್ದಾರೆ ಸಾವಿರಕ್ಕೂ ಹೆಚ್ಚು ಮೀನುಗಾರರು

ಆಂಧ್ರ ಗಡಿಯಲ್ಲಿ ಪರದಾಡುತ್ತಿದ್ದಾರೆ ಸಾವಿರಕ್ಕೂ ಹೆಚ್ಚು ಮೀನುಗಾರರು

Spread the love

ಕೋಲಾರ: ಮಂಗಳೂರು ಬಂದರಿನಿಂದ ಆಂಧ್ರ ಪ್ರದೇಶಕ್ಕೆ ತೆರಳುತ್ತಿದ್ದ ಮೀನುಗಾರರನ್ನು ಕೋಲಾರದ ಗಡಿ ಭಾಗವಾದ ನಂಗಲಿ ಚೆಕ್ ಪೋಸ್ಟ್ ಬಳಿ ಆಂಧ್ರಪ್ರದೇಶ ಪೊಲೀಸರು ತಡೆ ಹಿಡಿದಿದ್ದಾರೆ.

ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ನಂಗಲಿ ಗಡಿಯಲ್ಲಿ ಆಂಧ್ರ ಪೊಲೀಸರು ಮೀನುಗಾರರಿಗೆ ತಡೆ ಮಾಡಿದ್ದು, ಆಂಧ್ರ ಮೂಲದ ನೂರಾರು ಮಂದಿ ಮೀನುಗಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಇತ್ತ ಮಂಗಳೂರಿನಲ್ಲಿ ಮೀನುಗಾರಿಕೆ ಮಾಡಿಕೊಂಡು ಇವರು ಜೀವನ ನಡೆಸುತ್ತಿದ್ದರು. ಕೊರೊನಾ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಎಲ್ಲೆಡೆ ಲಾಕ್‍ಡೌನ್ ಮಾಡಿರುವ ಪರಿಣಾಮ ಮಂಗಳೂರು ಮೀನುಗಾರಿಕಾ ಇಲಾಖೆ ಅನುಮತಿ ಪಡೆದು, ಮಿನಿ ಬಸ್‍ಗಳ ಮೂಲಕ ಸಾವಿರಕ್ಕೂ ಹೆಚ್ಚಿನ ಮೀನುಗಾರರು ಆಂಧ್ರದತ್ತ ಮುಖಮಾಡಿದ್ದರು

ಆದರೆ ನಂಗಲಿ ಬಳಿ ಆಂಧ್ರ ಪೊಲೀಸರು ಮೀನುಗಾರರನ್ನು ತಡೆದು ಪ್ರವೇಶ ನಿರಾಕರಿಸಿದ್ದಾರೆ. ಈ ಮೀನುಗಾರರು ಆಂಧ್ರದ ನೆಲ್ಲೂರು, ವಿಶಾಕಪಟ್ಟಣಂ, ಪ್ರಕಾಶಂ, ಶ್ರೀಕಾಕುಲಂ ಜಿಲ್ಲೆಗಳಿಗೆ ಸೇರಿದವರಾಗಿದ್ದಾರೆ. ಸ್ಥಳಕ್ಕೆ ಚಿತ್ತೂರು ಜಿಲ್ಲೆಯ ಎಸ್‍ಪಿ ಹಾಗೂ ಡಿಸಿ ಭೇಟಿ ನೀಡಿ ಪರಿಶೀಲನೆ ನಡೆಸಲಾಗಿದ್ದು, ಗಡಿಯಲ್ಲಿ ಸಾವಿರಕ್ಕೂ ಹೆಚ್ಚಿನ ಮೀನುಗಾರರು ಪರದಾಡುತ್ತಿದ್ದಾರೆ.


Spread the love

About Laxminews 24x7

Check Also

ಸುವರ್ಣಸೌಧದಲ್ಲಿ‌ ಸ್ಪೀಕರ್, ಸಭಾಪತಿಗಳು ಹಸಿರೀಕರಣಕ್ಕೆ ಪಣ ತೊಟ್ಟಿದ್ದಾರೆ

Spread the loveಬೆಳಗಾವಿ: ಸುವರ್ಣಸೌಧದಲ್ಲಿ ಪರಿಸರ ಕಾಳಜಿ ಮೆರೆಯುವ ನಿಟ್ಟಿನಲ್ಲಿ ಸ್ಪೀಕರ್ ಯು ಟಿ ಖಾದರ್ ಚಳಿಗಾಲದ‌ ಅಧಿವೇಶನದಲ್ಲಿ ವಿನೂತನ ಪ್ರಯೋಗವೊಂದನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ