Breaking News

ಆಕಾಶದಲ್ಲಿ ಜೀವ ಉಳಿಸಿದ ‘ಡಾಕ್ಟರ್’ ಶಾಸಕಿ: ಅಂಜಲಿ ನಿಂಬಾಳ್ಕರ್ ಕಾರ್ಯಕ್ಕೆ ಮನಸೋತ ಗಗನಸಖಿಯರು – ವಿಮಾನದಲ್ಲೇ ಅದ್ಧೂರಿ ಸನ್ಮಾನ

Spread the love

ಆಕಾಶ ಮಾರ್ಗದಲ್ಲಿ ಕಠಿಣ ಸಂದರ್ಭದಲ್ಲಿ ಒಬ್ಬರ ಜೀವ ಉಳಿಸಿದ ಮಾಜಿ ಶಾಸಕಿ ಹಾಗೂ ಎಐಸಿಸಿ ಕಾರ್ಯದರ್ಶಿ ಡಾ. ಅಂಜಲಿ ನಿಂಬಾಳ್ಕರ್ ಅವರ ಮಾನವೀಯ ಕಾರ್ಯಕ್ಕೆ ಇಂಡಿಗೋ ವಿಮಾನಯಾನ ಸಂಸ್ಥೆಯ ಗಗನಸಖಿ ವಿಶೇಷವಾಗಿ ಗೌರವ ಸಲ್ಲಿಸಿದ್ದಾರೆ.

ಪುದುಚೇರಿಯಿಂದ ಪ್ರಯಾಣಿಸುತ್ತಿದ್ದ ವೇಳೆ ವಿಮಾನದಲ್ಲಿದ್ದ ಗಗನಸಖಿಯೊಬ್ಬರು ಡಾ. ಅಂಜಲಿ ನಿಂಬಾಳ್ಕರ್ ಅವರನ್ನು ಭೇಟಿಯಾಗಿ, ಪ್ರೀತಿಯಿಂದ ಗುಲಾಬಿ ಹೂವು ಹಾಗೂ ಗ್ರೀಟಿಂಗ್ ಕಾರ್ಡ್ ನೀಡಿ ಹೃದಯಸ್ಪರ್ಶಿ ಸ್ವಾಗತ ಕೋರಿದರು. ಈ ವೇಳೆ ಅತೀವ ಭಾವುಕರಾದ ಅಂಜಲಿ ನಿಂಬಾಳ್ಕರ್ ಅವರು ಕ್ಷಣಕಾಲ ಮೌನಕ್ಕೆ ಶರಣಾದರು. ತದನಂತರ ಗಗನಸಖಿ, “ಆಕಾಶದಲ್ಲಿ ನೀವು ಒಬ್ಬರ ಜೀವ ಉಳಿಸಿದ್ದೀರಿ, ಅದಕ್ಕಾಗಿ ಧನ್ಯವಾದಗಳು ಮೇಡಂ ಜೀ” ಎಂದು ಕೃತಜ್ಞತೆ ಸಲ್ಲಿಸಿ, ಅವರೊಂದಿಗೆ ಸವಿನೆನಪಿನ ಫೋಟೋ ತೆಗೆಸಿಕೊಂಡರು. ಈ ಘಟನೆಯು ಅಲ್ಲಿದ್ದ ಇತರ ಪ್ರಯಾಣಿಕರ ಗಮನ ಸೆಳೆದಿದ್ದು, ಡಾ. ಅಂಜಲಿ ಅವರ ಸಮಯಪ್ರಜ್ಞೆ ಮತ್ತು ಮಾನವೀಯತೆಯನ್ನು ಇಂಡಿಗೋ ಸಿಬ್ಬಂದಿ ಮತ್ತೊಮ್ಮೆ ಕೊಂಡಾಡಿದರು.


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ