Breaking News

ನಡಿಗೆಯ ಮೂಲಕ ತಿರುಪತಿ ತಲುಪಿದ ಶಾಸಕಿ ನಿಂಬಾಳ್ಕರ್ ದಂಪತಿ

Spread the love

ಬೆಳಗಾವಿ, ಜ.20-ರಾಜ್ಯದ ಇತಿಹಾಸದಲ್ಲಿ ಹಿರಿಯ ಐಪಿಎಸ್ ಅಧಿಕಾರಿ ಮತ್ತು ಶಾಸಕರಾದ ಅವರ ಪತ್ನಿ 9 ದಿನಗಳ ಪಾದಯಾತ್ರೆ ಮೂಲಕ ತೀರ್ಥಯಾತ್ರೆ ಮುಗಿಸಿ ಗಮನ ಸೆಳೆದಿದ್ದಾರೆ. ಬೆಂಗಳೂರು ನಗರ ಹೆಚ್ಚುವರಿ ಪೊಲೀಸ್ ಆಯುಕ್ತರಾದ (ಆಡಳಿತ) ಹೇಮಂತ ನಿಂಬಾಳ್ಕರ್ ಮತ್ತು ಅವರ ಪತ್ನಿ ಖಾನಾಪುರ ಶಾಸಕಿ ಡಾ. ಅಂಜಲಿ ನಿಂಬಾಳ್ಕರ್ ಕಳೆದ ಜ. 11ರಂದು ಬೆಂಗಳೂರಿಂದ ಪಾದಯಾತ್ರೆ ಹೊರಟು ಸುದೀರ್ಘ 263 ಕಿಮೀ ನಡಿಗೆಯ 9 ದಿನಗಳ ನಂತರ ಇಂದು ತಿರುಪತಿ ತಿರುಮಲ ದೇವಸ್ಥಾನಕ್ಕೆ ಬೆಳಿಗ್ಗೆ ತಲುಪಿದರು.

ಪ್ರಾರ್ಥನಾ ಪಾದಯಾತ್ರೆ ಮೂಲಕ ತಿರುಮಲ ಸನ್ನಿಧಿ ತಲುಪಿದ ನಿಂಬಾಳ್ಕರ್ ದಂಪತಿ ಶ್ರೀನಿವಾಸನ ದರ್ಶನಾಶೀರ್ವಾದ ಪಡೆದರು. ತಿರುಪತಿಯಿಂದ ತಿರುಮಲದವರೆಗಿನ 2500 ಮೇಲ್ಪಟ್ಟು ಮೇಲಗಪಂಕ್ತಿ ಹತ್ತುವುದು ಸಹ ಒಂದು ಸವಾಲಿನ ಭಕ್ತಿಯೇ ಸರಿ. ದೈವಿಯಾತ್ರೆ ದೈಹಿಕ ಮತ್ತು ಮಾನಸಿಕ ಆರೋಗ್ಯ ಹೆಚ್ಚಿಸಿದೆ ಎಂದು ಶಾಸಕಿ ಡಾ. ಅಂಜಲಿ ನಿಂಬಾಳ್ಕರ್ ಈ ಸಂದರ್ಭದಲ್ಲಿ ಹೇಳಿದರು.


Spread the love

About Laxminews 24x7

Check Also

ಅಕ್ರಮ ಎಸಗಿರುವ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಒತ್ತಾಯ

Spread the loveಬೆಳಗಾವಿ: ಮಹಾನಗರ ಪಾಲಿಕೆ 8 ಮತ್ತು 9 ವಾರ್ಡ್‌ನಲ್ಲಿನ  ಆಸ್ತಿಗಳಿಗೆ ಮತ್ತೊಬ್ಬರ ಹೆಸರಿನಲ್ಲಿ ಬಾಂಡ್ ಆಧಾರದ ಮೇಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ