ಗೋಕಾಕ: ತಾಲೂಕಿನ ಅಂಕಲಗಿ ಘಟಕ ಹೋಮ್ಗಾರ್ಡ ಆಗಿರುವ ಹೊಳೆಪ್ಪಾ ಬಸವಣ್ಣಿ ನೇಸರಗಿ ಅವರಿಗೆ ೨೦೨೫ರ ಮುಖ್ಯಮಂತ್ರಿಗಳ ಸೇವಾ ಪದಕ ದೊರೆತಿರುವುದಕ್ಕಾಗಿ ಶಾಸಕ ರಮೇಶ ಜಾರಕಿಹೊಳಿ ಅವರು ನಗರದ ತಮ್ಮ ಗೃಹ ಕಚೇರಿಯಲ್ಲಿ ಸನ್ಮಾನಿಸಿ ಗೌರವಿಸಿದರು.
ಹೊಳೆಪ್ಪಾ ನೇಸರಗಿ ಅವರ ಸಮರ್ಪಣಾ ಮನೋಭಾವವನ್ನು ಗುರುತಿಸುವುದು ಮತ್ತು ಪ್ರೋತ್ಸಾಹಿಸುವುದು. ದೀರ್ಘಕಾಲದ ಸೇವೆ ಬಂದೋಬಸ್ತ್ ಕರ್ತವ್ಯ, ತುರ್ತು ಸಂದರ್ಭಗಳಲ್ಲಿ ಅಗ್ನಿ ಸುರಕ್ಷತೆ, ಮತ್ತು ಶೌರ್ಯ ಪ್ರದರ್ಶಿಸಿದ ಕಾರಣ ಸಿಎಂ ಪದಕ ಲಭಿಸಿದ್ದು ಇಂಥಹ ಸಿಬ್ಬಂದಿಗಳಿಗೆ ಪ್ರಶಸ್ತಿಗಳು ಮತ್ತಷ್ಟು ಪುಷ್ಟಿ ನೀಡುತ್ತವೆ ಎಂದು ಶಾಸಕರು ಹೇಳಿದರು.
ಈ ಸಂದರ್ಭದಲ್ಲಿ ಶಾಸಕರ ಆಪ್ತ ಸಹಾಯಕರಾದ ಭೀಮನಗೌಡ ಪೊಲೀಸ್ ಗೌಡರ, ಮುಖಂಡರಾದ ಲಕ್ಷö್ಮಣ ಜಡಗಿ, ಲಕ್ಕಪ್ಪ ತಳವಾರ, ಈರಪ್ಪ ನೇಸರಗಿ, ಶಾಂತು ಕೂಡಜೋಗಿ, ಸಂತೋಷ್ ಪೂಜಾರಿ, ಮಾರುತಿ ಬಾಗಡಿ, ಬಸವರಾಜ್ ಕುರುಪಿ ಸೇರಿದಂತೆ ಅನೇಕರು ಇದ್ದರು.
Laxmi News 24×7