Breaking News

ಉಡುಪಿ ಶ್ರೀಕೃಷ್ಣ ಮಠಕ್ಕೆ ಅಣ್ಣಾಮಲೈ ಭೇಟಿ; ಅಭಿಮಾನಿಗಳಿಂದ ಆತ್ಮೀಯ ಸ್ವಾಗತ

Spread the love

ಉಡುಪಿ: ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ  ನೀಡಿ ಶ್ರೀಕೃಷ್ಣ ದೇವರ ದರ್ಶನ ಪಡೆದರು. ಮಠದ ವತಿಯಿಂದ ಅಣ್ಣಾಮಲೈ ಅವರನ್ನು ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು.

ಕನಕ ನವಗ್ರಹ ಕಿಂಡಿಯ ಮೂಲಕ ಶ್ರೀಕೃಷ್ಣ ದೇವರ ದರ್ಶನ ಪಡೆದ ಅಣ್ಣಾಮಲೈ, ಬಳಿಕ ಶ್ರೀಮಠದ ಪ್ರಸಾದ ಸ್ವೀಕರಿಸಿದರು. ಈ ವೇಳೆ ಮಠದ ವತಿಯಿಂದ ಪ್ರಸಾದ ಹಾಗೂ ಕೃಷ್ಣದೇವರ ಭಾವಚಿತ್ರ ನೀಡಿ ಅವರನ್ನು ಗೌರವಿಸಲಾಯಿತು.

ಅಣ್ಣಾಮಲೈ ಅವರು ಈ ಹಿಂದೆ ಉಡುಪಿಯಲ್ಲಿ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು. ಹೀಗಾಗಿ ಅವರು ಮಠಕ್ಕೆ ಭೇಟಿ ನೀಡಿರುವ ಸುದ್ದಿ ತಿಳಿಯುತ್ತಿದ್ದಂತೆ ಅವರನ್ನು ಭೇಟಿಯಾಗಲು ಅನೇಕ ಅಭಿಮಾನಿಗಳು ಆಗಮಿಸಿದ್ದರು.

ಬಿಜೆಪಿಯನ್ನು ತೊರೆದು ‘ವೀ ದ ಲೀಡರ್ಸ್ ಮೂವ್‌ಮೆಂಟ್’ ಆರಂಭಿಸಿದ ಬಳಿಕ ಅಣ್ಣಾಮಲೈ ಉಡುಪಿಗೆ ನೀಡುತ್ತಿರುವ ಎರಡನೇ ಭೇಟಿ ಇದಾಗಿದೆ. ಈ ಹಿಂದೆ ಅವರು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೂ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದರು.

ಉಡುಪಿಯೊಂದಿಗೆ ಹಿಂದಿನ ಪೊಲೀಸ್ ಸೇವೆಯ ದಿನಗಳಿಂದಲೇ ಅಣ್ಣಾಮಲೈ ಅವರಿಗೆ ವಿಶೇಷ ನಂಟಿದ್ದು, ಅವರ ಭೇಟಿಯ ವೇಳೆ ಅಭಿಮಾನಿಗಳು ಹಾಗೂ ಸ್ಥಳೀಯರು ಆತ್ಮೀಯವಾಗಿ ಸ್ವಾಗತಿಸಿದರು.


Spread the love

About Laxminews 24x7

Check Also

ವೇತನ ಹೆಚ್ಚಳಕ್ಕೆ ಆಗ್ರಹಿಸಿ ಚಾಲಕರ ಸ್ಟ್ರೈಕ್‌ – ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಸಂಚಾರ ಸ್ಥಗಿತ?

Spread the loveಬೆಂಗಳೂರು: ಕತ್ರಿಗುಪ್ಪೆಯ ಕಾಮಾಕ್ಯ ಎಲೆಕ್ಟ್ರಿಕಲ್ ಡಿಪೋ 13ರಲ್ಲಿ ವೇತನ ಹೆಚ್ಚಳಕ್ಕೆ ಆಗ್ರಹಿಸಿ ಚಾಲಕರ ಪ್ರತಿಭಟನೆ ನಡೆಸಿದ್ದಾರೆ. ಇದರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ