Breaking News

SSLC ಫಲಿತಾಂಶದಲ್ಲಿ ಮತ್ತೊಂದು ಎಡವಟ್ಟು: ಕೇವಲ 12 ಅಂಕ ನಮೂದು; ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

Spread the love

ಕೊಪ್ಪಳ: ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟವಾದ ಎಸ್​​​ಎಸ್​ಎಲ್​​ಸಿ ಪರೀಕ್ಷೆಯ ಫಲಿತಾಂಶ ಇತ್ತೀಚೆಗೆ ಪ್ರಕಟವಾಗಿದೆ. ಇತಿಹಾಸದಲ್ಲೇ ಮೊದಲ ಬಾರಿಗೆ ತೇರ್ಗಡೆಯಲ್ಲಿ ದಾಖಲೆಯ ರಿಸಲ್ಟ್​ ಬಂದಿದೆ. ಆದರೆ ಮೌಲ್ಯಮಾಪಕರಿಂದ ಉಂಟಾಗಿರುವಂತಹ ಕೆಲ ಎಡವಟ್ಟುಗಳು ದಿನೇದಿನೆ ಬೆಳಕಿಗೆ ಬರುತ್ತಿವೆ. ಇದೀಗ ಜಿಲ್ಲೆಯಲ್ಲೂ ಶಿಕ್ಷಣ ಇಲಾಖೆಯ ಎಡವಟ್ಟು ಒಂದು ಬೆಳಕಿಗೆ ಬಂದಿದ್ದು, ಅದರಿಂದ ಆಘಾತಗೊಂಡ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನಿಸಿರುವಂತಹ ಘಟನೆ ನಡೆದಿದೆ.

ಕೊಪ್ಪಳ ತಾಲೂಕಿನ ಕಾತರಕಿ ಗುಡ್ಲಾನೂರ ಗ್ರಾಮದ ನಿವಾಸಿ ಸಂಜನಾ ಮಡಿವಾಳರ ಎಸ್​​​ಎಸ್​ಎಲ್​​ಸಿ ಪರೀಕ್ಷೆ ಬರೆದಿದ್ದಳು. ಆದರೆ ಫಲಿತಾಂಶದಂದು ಆಘಾತವೊಂದು ಎದುರಾಗಿತ್ತು. ಎಲ್ಲಾ ವಿಷಯಗಳಲ್ಲಿ ಉತ್ತಮ ಅಂಕ ಪಡೆದುಕೊಂಡಿದ್ದ ಸಂಜನಾ, ಕನ್ನಡ ವಿಷಯದಲ್ಲಿ ಅಂಕಪಟ್ಟಿಯಲ್ಲಿ ಕೇವಲ 12 ಅಂಕಗಳು ಎಂದು ನಮೂದಾಗಿತ್ತು. ಆದರೆ ಉತ್ತರ ಪತ್ರಿಕೆಯ ಫೋಟೋ ಪ್ರತಿ ತರೆಸಿಕೊಂಡು ಪರಿಶೀಲನೆ ಮಾಡಿದಾಗ 71 ಅಂಕ ಪಡೆದುಕೊಂಡಿರುವುದು ಗೊತ್ತಾಗಿದ್ದು, ಸದ್ಯ ಸಂಜನಾ ನಿಟ್ಟುಸಿರು ಬಿಟ್ಟಿದ್ದಾಳೆ.

ಹೆಚ್ಚು ಅಂಕ ನಿರೀಕ್ಷಿಸಿದ್ದ ಸಂಜನಾ, ಅಂಕಪಟ್ಟಿಯಲ್ಲಿ ಫೇಲ್ ಆಗಿರುವುದನ್ನು ಕಂಡು ತೀವ್ರ ಮಾನಸಿಕ ಆಘಾತಕ್ಕೊಳಗಾಗಿದ್ದಳು. ಇದೇ ಕಾರಣಕ್ಕೆ ದುಡುಕಿನ ನಿರ್ಧಾರಕ್ಕೆ ಮುಂದಾಗಿದ್ದಳು. ಶಿಕ್ಷಣ ಇಲಾಖೆಯ ಎಡವಟ್ಟಿನಿಂದ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನಿಸಿದ್ದಳು. ಆದರೆ, ಪೋಷಕರ ಸಮಯಪ್ರಜ್ಞೆಯಿಂದಾಗಿ ದೊಡ್ಡ ಅನಾಹುತವೊಂದು ತಪ್ಪಿದ್ದು, ವಿದ್ಯಾರ್ಥಿನಿ ಪ್ರಾಣಾಪಾಯದಿಂದ ಪಾರಾಗಿದ್ದಾಳೆ.

ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ವಿದ್ಯಾರ್ಥಿನಿ ಸಂಜನಾ, ಕಷ್ಟಪಟ್ಟು ಓದಿ ಉತ್ತಮ ಅಂಕ ಗಳಿಸಿದ್ದರೂ, ಇಲಾಖೆಯವರ ನಿರ್ಲಕ್ಷ್ಯದಿಂದಾಗಿ ಸ್ನೇಹಿತರ ಮುಂದೆ ಮತ್ತು ಹೆತ್ತವರಿಗೆ ಅವಮಾನ ಅನುಭವಿಸಬೇಕಾಯಿತು ಎಂದು ಅಳಲು ತೋಡಿಕೊಂಡಿದ್ದಾಳೆ.

ಇನ್ನು ಈ ಬಗ್ಗೆ ಸಂಜನಾ ತಂದೆ ಮಂಜುನಾಥ್​ ಮಡಿವಾಳರ ಮಾತನಾಡಿದ್ದು, ತಪ್ಪಿಸ್ಥರ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹಿಸಿದ್ದಾರೆ. ನನ್ನ ಮಗಳೊಂದಿಗೆ ಆದ ಘಟನೆ ಬೇರೆ ಮಕ್ಕಳೊಂದಿಗೆ ಆಗಬಾರದು. ಶಿಕ್ಷಣ ಇಲಾಖೆ ಎಡವಟ್ಟಿನಿಂದ ನನ್ನ ಮಗಳನ್ನು ಕಳೆದುಕೊಳ್ಳುತ್ತಿದ್ದೆ. ಹೀಗಾಗಿ ತಪ್ಪು ಮಾಡಿದವರಿಗೆ ಶಿಕ್ಷೆ ಆಗಲೇಬೇಕು ಎಂದು ಮಂಜುನಾಥ್ ಅವರು ಒತ್ತಾಯಿಸಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಗಣತಿ ಪ್ರಗತಿ ಪರಿಶೀಲನಾ ಸಭೆ

Spread the loveಗಣತಿ ಕಾರ್ಯಕ್ಕೆ ನಿಯೋಜಿಸಲ್ಪಟ್ಟ ವಿವಿಧ ಸ್ತರದ ಅಧಿಕಾರಿ ಮತ್ತು ಸಿಬ್ಬಂದಿ ನಿಗದಿತ ಅವಧಿ ಒಳಗೆ ಕಾರ್ಯವನ್ನು ಪೂರ್ಣಗೊಳಿಸಬೇಕು. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ