Breaking News

ಪ್ರಧಾನ್‌ ಅವರನ್ನು ಹುದ್ದೆಯಿಂದ ತೆಗೆಯುವ ಮೂಲಕ ಪ್ರಧಾನಿಯನ್ನು ಬಚಾವ್‌ ಮಾಡಿದೆ: ಅಖಿಲೇಶ್‌ ಯಾದವ್‌

Spread the love

ನವದೆಹಲಿ: ಸರ್ಕಾರವು ಒಬ್ಬ ‘ಪ್ರಧಾನ್’ ಅವರನ್ನು ಹುದ್ದೆಯಿಂದ ತೆಗೆದುಹಾಕುವ ಮೂಲಕ ಸ್ವತಃ ‘ಪ್ರಧಾನ ಮಂತ್ರಿ’ಯವರನ್ನು ಬಚಾವ್ ಮಾಡಿದೆ ಎಂದು ಸಮಾಜವಾದಿ ಪಕ್ಷದ ಅಧ್ಯಕ್ಷ, ಕನ್ನೌಜ್ ಸಂಸದ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ.

ಲೋಕಸಭೆಯಲ್ಲಿ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕಟ್ಟುನಿಟ್ಟಿನ ತಡೆ ಕಾಯ್ದೆಗೆ ತಿದ್ದುಪಡಿ ತರುವ ಮಸೂದೆಯ ಮೇಲಿನ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.

ಯುವಜನರ ಒಗ್ಗಟ್ಟು ಮತ್ತು ಮನೋಬಲಕ್ಕೆ ನಾನು ತಲೆಬಾಗುತ್ತೇನೆ. ಯುವಕರ ಆಕ್ರೋಶಕ್ಕೆ ಬೆದರಿ ಸರ್ಕಾರ ಮಂಡಿಯೂರುವಂತಾಯಿತು. ತಾವು ಸೋಲಿಸಲಾಗದವರು ಎಂದು ಭಾವಿಸಿದ್ದ ಸರ್ಕಾರಕ್ಕೆ ‘ಜಗತ್ತು ಬಗ್ಗುತ್ತದೆ, ಬಗ್ಗಿಸುವವರು ಬೇಕು’ ಎಂಬುದನ್ನು ಯುವಕರು ಸಾಬೀತುಪಡಿಸಿದ್ದಾರೆ ಎಂದು ಹೇಳಿದರು.

ವಿದ್ಯಾರ್ಥಿಗಳ ಈ ಹೋರಾಟಕ್ಕೆ ಪೋಷಕರಿಂದಲೂ ವ್ಯಾಪಕ ಬೆಂಬಲ ಸಿಕ್ಕಿದೆ. ಸರ್ಕಾರಗಳು ಕೇವಲ ಒತ್ತಡಕ್ಕೆ ಸಿಲುಕಿದಾಗ ಮಾತ್ರ ಜನಪರ ನಿರ್ಧಾರಗಳನ್ನು ತೆಗೆದುಕೊಳ್ಳುತ್ತವೆ. ರೈತರ ಪ್ರತಿಭಟನೆಯ ವೇಳೆಯೂ ನಾವು ಇದನ್ನು ನೋಡಿದ್ದೇವೆ. ಚುನಾವಣೆ ಹತ್ತಿರ ಬಂದಾಗ ಸರ್ಕಾರ ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆಯಿತು ಎಂದು ಸ್ಮರಿಸಿದರು.

ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದಲೂ ಇಡೀ ಶಿಕ್ಷಣ ವ್ಯವಸ್ಥೆ, ಪರೀಕ್ಷೆಗಳು ಮತ್ತು ವಿಶ್ವವಿದ್ಯಾಲಯಗಳಿಗೆ ಒಂದೇ ಬಣ್ಣ ಬಳಿಯುವ ಮೂಲಕ ಅವುಗಳನ್ನು ನಾಶಮಾಡಲು ಯತ್ನಿಸುತ್ತಿದೆ. ಇದರಿಂದ ವಿದ್ಯಾರ್ಥಿಗಳಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಜಗತ್ತಿನ ಅತಿ ದೊಡ್ಡ ಪಕ್ಷವೇ ಮಂಡಿಯೂರುವಂತೆ ಆಂದೋಲನ ರೂಪಿಸಿತು. ಸರ್ಕಾರದ ಈ ಧೋರಣೆ ಬದಲಾಗಬೇಕು ಎಂದು ಅಖಿಲೇಶ್ ಯಾದವ್ ಆಗ್ರಹಿಸಿದ್ದಾರೆ.

Spread the love

About Laxminews 24x7

Check Also

ಮದ್ವೆಗೆ ನಿರಾಕರಿಸಿದ್ದಕ್ಕೆ ಬೈಕ್ ತಡೆದಿದ್ದ ಪ್ರೇಯಸಿ – ಹ್ಯಾಂಡಲ್‌ಗೆ ಜೋತುಬೀಳಿಸಿಕೊಂಡೇ ರಸ್ತೆಯಲ್ಲಿ ಎಳೆದೊಯ್ದ ಪ್ರಿಯಕರ

Spread the loveಪಾಟ್ನಾ: ಮದುವೆಗೆ ನಿರಾಕರಿಸಿದ್ದಕ್ಕೆ ಬೈಕ್ ತಡೆದು ನಿಂತಿದ್ದ ಪ್ರೇಯಸಿಯನ್ನು ಹ್ಯಾಂಡಲ್‌ಗೆ ಜೋತುಬೀಳಿಸಿಕೊಂಡೇ ಪ್ರಿಯಕರ ರಸ್ತೆಯಲ್ಲೇ ಎಳೆದಾಡಿದ ಘಟನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ